ಆರ್ಭಟಿಸದ ಮುಂಗಾರು: ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ರಾಜ್ಯಕ್ಕೆ ಮುಂಗಾರು ಅಧಿಕೃತವಾಗಿ ಪ್ರವೇಶಿಸಿದ್ದರೂ ಅಬ್ಬರ ಆರ್ಭಟ ತೋರದೆ ಬಿಡುವು ಪಡೆದುಕೊಂಡಿದೆ. ಸದ್ಯದ ಬೆಳವಣಿಗೆಯಂತೆ ಜೂ.7ರ ಬಳಿಕ ಕರಾವಳಿ ಭಾಗಗಳಲ್ಲಿ ಮುಂಗಾರು ಪ್ರಬಲವಾಗುವ ಸಾಧ್ಯತೆ ಅಂದಾಜಿಸಲಾಗಿದೆ.

ಉಂಟಾ ಮಳೆ?
ಜೂ.1ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆಯಂತೆ ಬೆಂಗಳೂರು, ರಾಮನಗರ ಭಾಘಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದ್ದರೆ, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಯ ಅಲ್ಲಲ್ಲಿ ಬೆಳಗಾವಿ,, ಶಿವಮೊಗ್ಗ, ಹಾವೇರಿ, ದಾವಣಗೆರೆ, ಚಿತ್ರದುರ್ಗ, ಪಾವಗಢ, ಬಳ್ಳಾರಿ, ಹಾಸನ, ಮೈಸೂರು, ಚಾಮರಾಜನಗರ, ಮಂಡ್ಯ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗಳ ಕೆಲವೆಡೆಗಳಲ್ಲಿ ಸಾಧಾರಣ ಮಳೆಯ ಮುನ್ಸೂಚನೆ ಇದೆ. ರಾಜ್ಯದ ಉಳಿದೆಡೆ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!