ಹೊಸದಿಗಂತ ಡಿಜಿಟಲ್ ಡೆಸ್ಕ್:
ಈ ಬಾರಿ ಬೇಸಿಗೆ ಕಾಲ ಬೇಗನೆ ಮುಗಿಯುತ್ತಿದ್ದು, 5 ದಿನ ಮುಂಚಿತವಾಗಿಯೇ ರಾಜ್ಯದಲ್ಲಿ ಮುಂಗಾರು ಆರಂಭವಾಗುವ ಸಾಧ್ಯತೆಗಳಿವೆ ಎಂದು ಭಾರತದ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಪ್ರತಿ ಬಾರಿ ಜೂನ್ 1ಕ್ಕೆ ಮಾನ್ಸೂನ್ ಮಾರುತ ಆರಂಭವಾಗುವ ವಾಡಿಕೆ ಇತ್ತು. ಆದರೆ, ಈ ವರ್ಷ ಮೇ 27ರಂದೇ ಕೇರಳಕ್ಕೆ ಮಾನ್ಸೂನ್ ಪ್ರವೇಶಿಸುವ ಸಾಧ್ಯತೆ ಇದೆ. ಜೂನ್ 1 ರಂದು ನೈಋತ್ಯ ಮಾರುತ ಕೇರಳವನ್ನು ಪ್ರವೇಶಿಸಿದರೆ, ಜೂನ್ 8ರೊಳಗೆ ಇಡೀ ದೇಶವನ್ನ ಆವರಿಸುತ್ತಿತ್ತು. ಆದರೆ, ಈ ಬಾರಿ 5 ದಿನ ಮುಂಚಿತವಾಗಿ ಮುಂಗಾರು ಮಳೆ ಆರಂಭವಾಗುತ್ತಿದೆ.
ಮುಂಗಾರು 5 ದಿನದ ಮುಂಚಿತವಾಗಿ ಬರುತ್ತಿರುವುದು ಕಳೆದ 16 ವರ್ಷದ ಬಳಿಕ ಇದೇ ಮೊದಲಾಗಿದೆ. 2009ರಲ್ಲಿ ಮೇ.23 ರಂದು ಇದೇ ರೀತಿಯಲ್ಲಿ ಮುಂಗಾರು 5 ದಿನಗಳ ಮುಂಚೆ ಆರಂಭವಾಗಿತ್ತು. ಈ ಬಾರಿ ಮೇ 27ರಂದು ಆರಂಭವಾಗುವ ಸಾಧ್ಯತೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.