ಹೊಸದಿಗಂತ ಡಿಜಿಟಲ್ ಡೆಸ್ಕ್:
ದಕ್ಷಿಣ ಕನ್ನಡ ಸಹಿತ ಕರಾವಳಿಯಲ್ಲಿ ಮಳೆಯಾರ್ಭಟ ಮುಂದುವರಿದಿರುವ ಬೆನ್ನಿಗೇ ಮುಂದಿನ 24 ತಾಸುಗಳಲ್ಲಿ ಮುಂಗಾರು ಇನ್ನಷ್ಟು ತೀವ್ರಗೊಳ್ಳಲಿರುವ ಎಚ್ಚರಿಕೆಯನ್ನು ಕೇಂದ್ರ ಹವಾಮಾನ ಇಲಾಖೆ ನೀಡಿದೆ.
ಕರಾವಳಿಯಲ್ಲಿ ಜುಲೈ 1 ರಿಂದ 3 ರವರೆಗೆ ಜೋರು ಮಳೆಯಾಗುವ ಮುನ್ಸೂಚನೆ ಇದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಸೋಮವಾರ ತಡರಾತ್ರಿಯಿಂದಲೇ ಮಳೆ ವೇಗ ಪಡೆದಿದೆ. ಹಲವೆಡೆ ತಗ್ಗು ಪ್ರದೇಶಗಳು ಜಲಾವೃತಗೊಂಡಿದ್ದು ಸಂಕಷ್ಟದ ಸ್ಥತಿ ನಿರ್ಮಾಣವಾಗಿದೆ.
ಇತ್ತ ಕಡಲು ಕೂಡಾ ಪ್ರಕ್ಷುಬ್ದಗೊಂಡಿದ್ದು, ಭಾರೀ ಗಾತ್ರದ ಅಲೆಗಳು ದಡಕ್ಕೆ ಅಪ್ಪಳಿಸುತ್ತಿವೆ. ಪ್ರವಾಸಿಗರು ಸ್ಥಳೀಯರು ಕಡಲತೀರಕ್ಕೆ ತೆರಳದಂತೆ ಜಿಲ್ಲಾಡಳಿತಗಳು ಎಚ್ಚರಿಕೆ ನೀಡಿದ್ದು, ಎಲ್ಲೆಡೆ



