ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಜು.17ರ ಬಳಿಕ ಮತ್ತಷ್ಟು ಮಳೆ, ಆರೆಂಜ್ ಅಲರ್ಟ್​

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಜುಲೈ 17ರ ಬಳಿಕ ಮಳೆ ಪ್ರಮಾಣ ಮತ್ತಷ್ಟು ಹೆಚ್ಚಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಆರೆಂಜ್ ಅಲರ್ಟ್​ ಘೋಷಿಸಲಾಗಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳಲ್ಲಿ ವರುಣನ ಆರ್ಭಟ ಇನ್ನಷ್ಟು ಹೆಚ್ಚಾಗಲಿದೆ.

ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗದಲ್ಲಿ ಮಳೆಯಾಗಲಿದೆ.

ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ. ಮಂಕಿ, ಸಿದ್ದಾಪುರ, ಗೋಕರ್ಣ, ಉಡುಪಿಯಲ್ಲಿ ಮಳೆಯಾಗಿದೆ. ಕೋಟಾ, ಕದ್ರಾ, ಕುಂದಾಪುರ, ಆಗುಂಬೆ, ಮಾಣಿ, ಕ್ಯಾಸಲ್​ರಾಕ್, ಕುಮಟಾ, ಕಾರವಾರ, ಪುತ್ತೂರು, ಹೊನ್ನಾವರ, ಮುನಿರಾಬಾದ್, ಶೃಂಗೇರಿ, ಜಯಪುರ, ಕಮ್ಮರಡಿ, ಕೊಪ್ಪ, ಕೊಟ್ಟಿಗೆಹಾರ, ಮುಲ್ಕಿ, ಜೋಯ್ಡಾ, ಕುರ್ಡಿ, ದೇವರಹಿಪ್ಪರಗಿ, ಹುಂಚದಕಟ್ಟೆ, ಭಾಗಮಂಡಲ, ಭದ್ರಾವತಿ, ತರಿಕರೆಯಲ್ಲಿ ಮಳೆಯಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!