ಕಾತೂರ ಗ್ರಾಮ ಪಂಚಾಯತ್ ಅಧ್ಯಕ್ಷೆ ಸಹಿತ 100 ಕ್ಕೂ ಹೆಚ್ಚಿನ ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ ಸೇರ್ಪಡೆ

ಹೊಸದಿಗಂತ ವರದಿ, ಯಲ್ಲಾಪುರ

ಸಚಿವರಾದ ಶಿವರಾಮ ಹೆಬ್ಬಾರ್ ಅವರ ಅಭಿವೃದ್ಧಿ ಪರವಾದ ಕಾರ್ಯಕ್ರಮಗಳನ್ನು ಮೆಚ್ಚಿ ಇಂದು ಮುಂಡಗೋಡ ತಾಲೂಕಿನ ಕಾತೂರ ಗ್ರಾಮ ಪಂಚಾಯತದ ಕಾಂಗ್ರೆಸ್ ಬೆಂಬಲಿತ ಅಧ್ಯಕ್ಷರು ಹಾಗೂ 3 ಜನ ಸದಸ್ಯರು ಸೇರಿದಂತೆ ಒಟ್ಟು 100 ಕ್ಕೂ ಹೆಚ್ಚಿನ ಕಾಂಗ್ರೆಸ್ ಕಾರ್ಯಕರ್ತರು ಕಾಂಗ್ರೆಸ್ ತೊರೆದು ಭಾರತೀಯ ಜನತಾ ಪಕ್ಷವನ್ನು ಸೇರ್ಪಡೆಗೊಂಡರು.

ಕಾಂಗ್ರೆಸ್ ತೊರೆದು ಭಾರತೀಯ ಜನತಾ ಪಕ್ಷವನ್ನು ಸೇರ್ಪಡೆಗೊಂಡ ಕಾರ್ಯಕರ್ತರುಗಳಿಗೆ ಮಾನ್ಯ ಸಚಿವರಾದ ಶಿವರಾಮ ಹೆಬ್ಬಾರ್ ಅವರು ಪಕ್ಷದ ಶಾಲು ಹಾಕಿ ಬರಮಾಡಿಕೊಂಡರು. ಪ್ರತಿಯೊಬ್ಬ ಕಾರ್ಯಕರ್ತರನ್ನು ಸಹ ತಮ್ಮ ಬೂತ್ ಗಳನ್ನು ಬಲಪಡಿಸುವಂತೆ ಕರೆ ನೀಡಿದರು.

ಈ ಸಂದರ್ಭದಲ್ಲಿ ಕಾತೂರ ಗ್ರಾಮ ಪಂಚಾಯತ ಅಧ್ಯಕ್ಷರಾದ ರೇಣುಕಾ ಮಾಯಣ್ಣನವರ್, ಸದಸ್ಯರಾದ ರಾಜು ರಾವಲ್, ಸಂಜು ಕೀರ್ತೆಪ್ಪನವರ, ಲಲಿತಾ ಆಡಿನವರ್ ಹಾಗೂ ವ್ಯವಸಾಯ ಸೇವಾ ಸಹಕಾರಿ ಸಂಘದ ಸದಸ್ಯರಾದ ಫಕೀರಪ್ಪ ಯಲ್ಲಾಪುರ ಉಪಸ್ಥಿತರಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!