ಪವನ್‌ ಕಲ್ಯಾಣ್‌ ರಸ್ತೆಗೆ ಬಂದಿದ್ದಕ್ಕೆ 25ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಪರೀಕ್ಷೆ ಮಿಸ್‌, ಏನಾಯ್ತು?

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಆಂಧ್ರಪ್ರದೇಶದ ಉಪ ಮುಖ್ಯಮಂತ್ರಿ ಪವನ್ ಕಲ್ಯಾಣ್ ಅವರ ಬೆಂಗಾವಲು ವಾಹನಗಳ ಓಡಾಟದಿಂದ 25ಕ್ಕೂ ಹೆಚ್ಚು ವಿದ್ಯಾರ್ಥಿಗಳು ನಿಗದಿತ ಸಮಯದೊಳಗೆ ಪರೀಕ್ಷಾ ಕೊಠಡಿಗೆ ಬರಲು ಸಾಧ್ಯವಾಗಿಲ್ಲ.

ತಡವಾಗಿ ಬಂದ 25 ಕ್ಕೂ ಹೆಚ್ಚು ಅಭ್ಯರ್ಥಿಗಳನ್ನು ನಿನ್ನೆ ಸೋಮವಾರ ವಿಶಾಖಪಟ್ಟಣದಲ್ಲಿ ನಡೆದ ನಿರ್ಣಾಯಕ ಸ್ಪರ್ಧಾತ್ಮಕ ಪರೀಕ್ಷೆಗೆ ಹಾಜರಾಗದೆ ನಿರ್ಬಂಧಿಸಿದ ಘಟನೆ ನಡೆದಿದೆ.

ಪೆಂಡುರ್ತಿಯ ಚಿನ್ನಮುಸಿಡಿವಾಡದಲ್ಲಿರುವ ಐಒಎನ್ ಡಿಜಿಟಲ್ ವಲಯ ಕಟ್ಟಡದಲ್ಲಿ ಬೆಳಗ್ಗೆ 8.30 ಕ್ಕೆ ಪರೀಕ್ಷೆ ಪ್ರಾರಂಭವಾಗಬೇಕಿತ್ತು. ರಾಷ್ಟ್ರೀಯ ತಂತ್ರಜ್ಞಾನ ಸಂಸ್ಥೆಗಳಿಗೆ ಪ್ರವೇಶವನ್ನು ನಿರ್ಧರಿಸುವ ಜಂಟಿ ಪ್ರವೇಶ ಪರೀಕ್ಷೆಗೆ ಹಾಜರಾಗಿದ್ದ ತನ್ನ ಪುತ್ರ ಪವನ್ ಕಲ್ಯಾಣ್ ಅವರ ಬೆಂಗಾವಲು ವಾಹನ ಸಂಚಾರಕ್ಕೆ ವಿಧಿಸಿದ ಟ್ರಾಫಿಕ್ ನಿರ್ಬಂಧದಿಂದ ತನ್ನ ಮಗ ಪರೀಕ್ಷೆಗೆ ತಡವಾಗಿ ಹಾಜರಾದ ಎಂದು ವಿದ್ಯಾರ್ಥಿಯ ತಾಯಿಯೊಬ್ಬರು ಬೇಸರ ವ್ಯಕ್ತಪಡಿಸಿದ್ದಾರೆ. ನಾವು ನಿನ್ನೆ ಪರೀಕ್ಷೆಗೆ ಹೋಗುವ ಮಧ್ಯೆ ಸಂಚಾರ ದಟ್ಟಣೆಯಲ್ಲಿ ಸಿಲುಕಿಕೊಂಡಿದ್ದೆವು. ಪವನ್ ಕಲ್ಯಾಣ್ ಅರಕುಗೆ ಹೋಗುತ್ತಿದ್ದ ಕಾರಣ ನಾವು ಹೋಗುತ್ತಿದ್ದ ವಾಹನವನ್ನು ನಿಲ್ಲಿಸಲಾಯಿತು ಎಂದಿದ್ದಾರೆ.

ಮತ್ತೊಬ್ಬ ಪೋಷಕ ಅನಿಲ್ ಕುಮಾರ್, ಪರೀಕ್ಷಾ ಕೇಂದ್ರದಲ್ಲಿ ಐದು ನಿಮಿಷಗಳ ವಿನಾಯಿತಿ ನೀಡಿದ್ದರೂ ಸಹ, ತಮ್ಮ ಮಗಳಿಗೆ ಪರೀಕ್ಷೆ ಬರೆಯಲು ಅವಕಾಶ ಸಿಗುತ್ತಿತ್ತು ಎನ್ನುತ್ತಾರೆ. ಮುಖ್ಯಮಂತ್ರಿಗಳು ಮತ್ತು ಉಪ ಮುಖ್ಯಮಂತ್ರಿಗಳು ಬಂದು ಹೋಗುತ್ತಾರೆ, ಆದರೆ ಪೊಲೀಸರು ಪರೀಕ್ಷಾ ಕೇಂದ್ರಕ್ಕೆ ಮಾಹಿತಿ ನೀಡಿ ಐದು ನಿಮಿಷಗಳ ವಿನಾಯಿತಿ ನೀಡಿದ್ದರೆ ವಿದ್ಯಾರ್ಥಿಗಳಿಗೆ ಅನುಕೂಲವಾಗುತ್ತಿತ್ತು ಎಂದು ಪೋಷಕರು ಅಲವತ್ತುಕೊಂಡಿದ್ದಾರೆ. ತಮ್ಮ ಮಗಳು ಬೆಳಗ್ಗೆ 8.32 ಕ್ಕೆ ಪರೀಕ್ಷಾ ಕೇಂದ್ರವನ್ನು ತಲುಪಿದ್ದರೂ, ಎರಡು ನಿಮಿಷ ತಡವಾಗಿ ಬಂದ ಕಾರಣ ಪ್ರವೇಶ ನಿರಾಕರಿಸಲಾಗಿದೆ ಎಂದು ಕುಮಾರ್ ಎನ್ನುವವರು ಅಳಲು ತೋಡಿಕೊಂಡಿದ್ದಾರೆ.

ಉಪ ಮುಖ್ಯಮಂತ್ರಿಗಳು ಬೆಳಗ್ಗೆ 8.41 ಕ್ಕೆ ಆ ಪ್ರದೇಶದಲ್ಲಿ ಓಡಾಡಿದ್ದಕ್ಕೂ ವಿದ್ಯಾರ್ಥಿಗಳು ತಡವಾಗಿ ಬಂದಿದ್ದಕ್ಕೂ ಯಾವುದೇ ಸಂಬಂಧವಿಲ್ಲ ಎಂಬುದು ಸ್ಪಷ್ಟವಾಗಿದೆ. ವಿದ್ಯಾರ್ಥಿಗಳು ಬೆಳಗ್ಗೆ 8.30ರೊಳಗೆ ಪರೀಕ್ಷೆಗೆ ಹಾಜರಾಗಬೇಕಿತ್ತು. ಅದಲ್ಲದೆ ಪರೀಕ್ಷೆಗೆ ಬಾರದ ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ, ಉಳಿದ ವಿದ್ಯಾರ್ಥಿಗಳು ಹಾಗಾದರೆ ಹೇಗೆ ಪರೀಕ್ಷೆಗೆ ಬಂದರು ಎಂದು ಕೇಳುತ್ತಾರೆ ಎಂದು ಪೊಲೀಸರು ಹೇಳಿದ್ದಾರೆ.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!