ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೇಂದ್ರ ರಾಜ್ಯ ಸಚಿವ (MoS) ಅಶ್ವಿನಿ ಚೌಬೆ ಅವರ ಬೆಂಗಾವಲು ವಾಹನ ಅಪಘಾತಕ್ಕೀಡಾಗಿದೆ. ವಾಹನದಲ್ಲಿದ್ದ ಹಲವಾರು ಪೊಲೀಸರು ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ. ಕೇಂದ್ರ ಸಚಿವರು ಬಕ್ಸರ್ ನಿಂದ ಪಾಟ್ನಾಗೆ ತೆರಳುತ್ತಿದ್ದಾಗ ತಡರಾತ್ರಿ ಈ ಅವಘಡ ಸಂಭವಿಸಿದೆ.
ಈ ಕುರಿತು ಟ್ವಿಟರ್ನಲ್ಲಿ ಹೇಳಿಕೆ ನೀಡಿರುವ ಸಚಿವರು, ಬಕ್ಸರ್ನಿಂದ ಪಾಟ್ನಾಕ್ಕೆ ತೆರಳುವ ವೇಳೆ ಕೊರಂಸಾರೈ ಪೊಲೀಸ್ ಠಾಣೆಯ ಕಾರು ಮಥಿಲ-ನಾರಾಯಣಪುರ ರಸ್ತೆ ಸೇತುವೆಯ ಕಾಲುವೆಯಲ್ಲಿ ಅಪಘಾತಕ್ಕೀಡಾಗಿದೆ. ಭಗವಾನ್ ಶ್ರೀರಾಮನ ಕೃಪೆಯಿಂದ ಪ್ರಾಣಾಪಾಯ ಉಂಟಾಗಿಲ್ಲ. ಗಾಯಗೊಂಡ ಪೊಲೀಸರು ಮತ್ತು ಚಾಲಕನನ್ನು ದುಮ್ರಾವ್ ಸದರ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿಸಿದ್ದಾರೆ.
ಪೊಲೀಸ್ ಸಿಬ್ಬಂದಿ ಮತ್ತು ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅವರನ್ನು ದುಮ್ರಾವ್ ಸದರ್ ಆಸ್ಪತ್ರೆಗೆ ಸಾಗಿಸಲಾಗಿದೆ. ಹೆಚ್ಚಿನ ಗಾಯಗಳೊಂದಿಗೆ ಇಬ್ಬರು ಪೊಲೀಸರನ್ನು ಪಾಟ್ನಾದ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಕೇಂದ್ರಕ್ಕೆ ಸ್ಥಳಾಂತರಿಸಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗುತ್ತಿದೆ…