ದಿಗಂತ ವರದಿ ಮಳವಳ್ಳಿ :
ರಸ್ತೆ ದಾಟುತ್ತಿದ್ದ ಬೈಕ್ಗೆ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯೊಬ್ಬ ತೀವ್ರ ಗಾಯಗೊಂಡು ಚಿಕಿತ್ಸೆ ಲಕಾರಿಯಾಗದೇ ಮೃತಪಟ್ಟ ಘಟನೆ ತಾಲೂಕಿನ ಹಾಡ್ಲಿ ಮೇಗಳಾಪುರ ಸರ್ಕಲ್ ಬಳಿ ನಡೆದಿದೆ.
ಹಾಡ್ಲಿ ಸಮೀಪದ ಕೂನನಪುರ ಗ್ರಾಮದ ನಿವಾಸಿ ಅರಸೇಗೌಡ ಪುತ್ರ ರಾಜು(60)ಮೃತ ವ್ಯಕ್ತಿ
ಮನೆಗೆ ಅಗತ್ಯ ದಿನಸಿ ಪದಾರ್ಥಗಳನ್ನು ಖರೀದಿಸಿ, ರಸ್ತೆಯನ್ನು ದಾಟುವಾಗ ಹಲಗೂರು ಕಡೆಯಿಂದ ವೇಗವಾಗಿ ಬಂದ ಕಾರು ಚಲಿಸುತ್ತಿದ್ದ ಬೈಕ್ ಗೆ ಡಿಕ್ಕಿ ಹೊಡೆದಿದೆ. ತೀವ್ರ ಗಾಯಗೊಂಡ ರಾಜುನನ್ನು ಮಂಡ್ಯ ಜಿಲ್ಲಾ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಚಿಕಿತ್ಸೆ ಲಕಾರಿಯಾಗದೇ ರಾತ್ರಿ ಮೃತಪಟ್ಟರು. ಶವ ಪರೀಕ್ಷೆಯ ನಂತರ ಮೃತದೇಹವನ್ನು ವಾರಸುದಾರರಿಗೆ ಹಸ್ತಾಂತರ ಮಾಡಲಾಯಿತು.
ಈ ಸಂಬಂಧ ಹಲಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.