ಶಾಸಕ ಮುನಿರತ್ನ ಮೇಲೆ ಮೊಟ್ಟ ಎಸೆತ: ಮೂವರು ಪೊಲೀಸ್ ವಶಕ್ಕೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬೆಂಗಳೂರು ರಾಜರಾಜೇಶ್ವರಿ ನಗರ ಕ್ಷೇತ್ರದ ಶಾಸಕ ಮುನಿರತ್ನ ಮೇಲೆ ಮೊಟ್ಟ ಎಸೆದಿರುವ ಘಟನೆ ನಡೆದಿದೆ.

ಕಾಂಗ್ರೆಸ್ ಕಾರ್ಯಕರ್ತರು ಮೊಟ್ಟೆ ಎಸೆದಿದ್ದಾರೆ. ಬಳಿಕ ಹಲ್ಲೆ ಯತ್ನಿಸಿದ್ದಾರೆ ಎನ್ನುವ ಅರೋಪವೂ ಕೇಳಿಬಂದಿದೆ. ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಈ ಕುರಿತಂತೆ ಮಾಹಿತಿ ನೀಡಿರುವ ಬೆಂಗಳೂರು ದಕ್ಷಿಣ ವಿಭಾಗದ ಡಿಸಿಪಿ ಸೈದುಲು ಅಡಾವತ್ ಅವರು, ಶಾಸಕ ಮುನಿರತ್ನ ಅವರ ಮೇಲೆ ಇಂದು ಬೆಳಿಗ್ಗೆ 11.30ರ ಸುಮಾರಿಗೆ ಮೊಟ್ಟೆ ಎಸೆಯಲಾಗಿದೆ. ಶಾಸಕರು ಕಾರ್ಯಕ್ರಮ ಮುಗಿಸಿ ವಾಪಾಸಾಗುತ್ತಿದ್ದಾಗ ಈ ಘಟನೆ ನಡೆದಿದೆ. ಶಾಸಕರ ಕಡೆಯಿಂದ ಇನ್ನೂ ನಮಗೆ ಯಾವುದೇ ದೂರು ಬಂದಿಲ್ಲ. ದೂರು ನೀಡಿದ ನಂತ್ರ ಮುಂದಿನ ಕ್ರಮ ಕೈಗೊಳ್ಳುತ್ತೇವೆ ಎಂದರು.

ಈ ಘಟನೆ ನಡೆಯುವುದಕ್ಕೂ ಮುನ್ನಮೊದಲೇ ಮಲ್ಲೇಶ್ವರಂ ಉಪ ವಿಭಾಗದ ಎಸಿಪಿ ಸ್ಥಳದಲ್ಲಿ ಇದ್ದರು. ಕಾರಿನಲ್ಲಿ ಹೋಗುವಂತೆ ಶಾಸಕರಿಗೆ ಪೊಲೀಸರು ಸೂಚಿಸಿದ್ದರು. ಆದರೂ ಮುಖ್ಯ ರಸ್ತೆ ಹತ್ತಿರವಿದ್ದ ಕಾರಣ ನಡೆದುಕೊಂಡೇ ಹೋಗಿದ್ದಾರೆ. ಈ ವೇಳೆ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆಯಲಾಗಿದೆ. ಈ ಘಟನೆ ಸಂಬಂಧ ಮುನ್ನೆಚ್ಚರಿಕೆ ಕ್ರಮವಾಗಿ ಮೂವರನ್ನು ವಶಕ್ಕೆ ಪಡೆದಿರುವುದಾಗಿ ತಿಳಿಸಿದರು.

- Advertisement - Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!