ಸಂಸದ ಅಸಾದುದ್ದೀನ್ ಓವೈಸಿ ಮೇಲೆ ಗುಂಡಿನ ದಾಳಿ ಪ್ರಕರಣ: ಇಬ್ಬರು ಪೊಲೀಸ್ ಕಸ್ಟಡಿಗೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಎಐಎಂಐಎಂ ಮುಖ್ಯಸ್ಥ , ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಮೇಲೆ ಗುಂಡು ಹಾರಿಸಿದ ಪ್ರಕರಣದಲ್ಲಿ ಬಂಧಿಸಲಾಗಿದ್ದ ಇಬ್ಬರನ್ನು ಉತ್ತರಪ್ರದೇಶದ ಸ್ಥಳೀಯ ನ್ಯಾಯಾಲಯವು 24 ಗಂಟೆಗಳ ಪೊಲೀಸ್ ಕಸ್ಟಡಿಗೆ ನೀಡಿದೆ.
ಫೆಬ್ರವರಿ 3ರಂದು ಉತ್ತರಪ್ರದೇಶದ ಚುನಾವಣಾ ಪ್ರಚಾರ ಸಭೆ ಮುಗಿಸಿ ವಾಪಸಾಗುತ್ತಿದ್ದಾಗ ಚಿಜರ್ಸಿ ಟೋಲ್ ಗೇಟ್‌ನಲ್ಲಿ ಓವೈಸಿಯ ಬೆಂಗಾವಲು ಪಡೆಯ ಮೇಲೆ ಇಬ್ಬರು ದುಷ್ಕರ್ಮಿಗಳು ಗುಂಡು ಹಾರಿಸಿದ್ದರು.ಮರುದಿನ ಹಾಪುರ್ ಪೊಲೀಸರು ದಾಳಿ ನಡೆಸಿದ ಸಚಿನ್ ಮತ್ತು ಶುಭಂ ಎಂಬುವರನ್ನು ಬಂಧಿಸಿದ್ದರು.
ಈ ದುಷ್ಕರ್ಮಿಗಳಿಗೆ ಶಸ್ತ್ರಾಸ್ತ್ರಗಳನ್ನು ಪೂರೈಸಿದ್ದ ವ್ಯಕ್ತಿಯನ್ನು ಪೊಲೀಸರು ಶನಿವಾರ ಬಂಧಿಸಿದ್ದಾರೆ. ಇಂದು ಪೊಲೀಸರು ಬಿಗಿ ಭದ್ರತೆಯೊಂದಿಗೆ ಇಬ್ಬರು ಆರೋಪಿಗಳ ವಿಚಾರಣೆ ನಡೆಸುತ್ತಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!