ರಾಜ್ಯಸಭೆಯಲ್ಲಿ ಕ್ಷಮೆಯಾಚಿಸಿದ ಸಂಸದೆ ಜಯಾ ಬಚ್ಚನ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯಸಭೆಯಲ್ಲಿ (Rajya Sabha) ಇಂದು ವಿದಾಯದ ಭಾಷಣದ ವೇಳೆ ಸಮಾಜವಾದಿ ಪಕ್ಷದ ಸಂಸದೆ ಜಯಾ ಬಚ್ಚನ್ (Jaya Bachchan) ಕ್ಷಮೆಯಾಚಿಸಿದ್ದಾರೆ.

ಸಮಾಜವಾದಿ ಪಕ್ಷದ ಸಂಸದೆ ಜಯಾ ಬಚ್ಚನ್ ಅವರು ಸಂಸತ್ತಿನ ನಡೆಯತ್ತಿದ್ದ ಬಜೆಟ್ ಅಧಿವೇಶನದಲ್ಲಿ ರಾಜ್ಯಸಭಾ ಅಧ್ಯಕ್ಷರಾದ ಜಗದೀಪ್ ಧನಕರ್ (Jagdeep Dhankar) ಅವರನ್ನು ವ್ಯಂಗ್ಯ ಮಾಡಿ ಮಾತನಾಡಿದ್ದರು. ಇದಕ್ಕೆ ಬಾರಿ ವಿರೋಧ ವ್ಯಕ್ತವಾಗಿತ್ತು. ಅದಕ್ಕೆ ಅವರು ಈಗ ರಾಜ್ಯಸಭೆಯಲ್ಲಿ ಎಲ್ಲರ ಸಮ್ಮುಖದಲ್ಲಿ ಕ್ಷಮೆ ಕೇಳಿದ್ದಾರೆ.

ಜಯಾ ಅವರು ತಮ್ಮ ವಿದಾಯದ ಭಾಷಣದ ವೇಳೆ ಸದನದ ಎಲ್ಲ ಸದಸ್ಯರಲ್ಲಿ, ತಾನು ಮುಂಗೋಪಿ ಆದರೆ ಯಾರನ್ನು ನೋಯಿಸುವ ಉದ್ದೇಶ ಹೊಂದಿಲ್ಲ ಎಂದು ಹೇಳಿ ಕ್ಷಮೆ ಕೇಳಿದ್ದಾರೆ.

ನಾನು ಏಕೆ ಕೋಪಗೂಳ್ಳುತ್ತೇನೆ ಎಂದು ಜನರು ನನ್ನನ್ನು ಪ್ರಶ್ನೆ ಮಾಡುತ್ತಾರೆ. ಅದು ನನ್ನ ಸ್ವಭಾವ. ನಾನು ನನ್ನನ್ನು ಬದಲಾಯಿಸಿಕೊಳ್ಳಲು ಸಾಧ್ಯವಿಲ್ಲ. ನಾನು ಏನನ್ನಾದರೂ ಇಷ್ಟಪಡದೇ ಇದ್ದಲ್ಲಿ ಅಥವಾ ಒಪ್ಪದೇ ಇದ್ದರೆ ತಾಳ್ಮೆಯನ್ನು ಕಳೆದುಕೊಳ್ಳುತ್ತೇನೆ. ನಾನು ನಿಮ್ಮಲ್ಲಿ ಯಾರೊಂದಿಗಾದರೂ ಅನುಚಿತವಾಗಿ ವರ್ತಿಸಿದ್ದರೆ ನಾನು ಕ್ಷಮೆಯಾಚಿಸುತ್ತೇನೆ ಎಂದರು.

ರಾಜ್ಯಸಭೆಯಿಂದ ನಿವೃತ್ತರಾಗುತ್ತಿರುವ ಸದಸ್ಯರ ಕೊಡುಗೆಯನ್ನು ಪ್ರೀತಿಯಿಂದ ಸ್ವೀಕರಿಸಿದ ಉಪಾಧ್ಯಕ್ಷ ಜಗದೀಪ್ ಧನಕರ್ ಅವರು ಮಾತನಾಡಿ ನಮ್ಮ ಗೌರವಾನ್ವಿತ ಸಹೋದ್ಯೋಗಿಗಳ ನಿವೃತ್ತಿ ನಿಸ್ಸಂದೇಹವಾಗಿ ಶೂನ್ಯವನ್ನು ಉಂಟು ಮಾಡುತ್ತದೆ. ಪ್ರತಿಯೊಂದು ಆರಂಭಕ್ಕೂ ಒಂದು ಅಂತ್ಯವಿದೆ. ಹಾಗೆಯೇ ಪ್ರತಿ ಅಂತ್ಯವು ಹೊಸ ಆರಂಭವನ್ನು ಹೊಂದಿದೆ ಎಂದು ಹೇಳಿ ಶುಭ ಹಾರೈಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!