ಚುನಾವಣಾ ರಾಜಕೀಯ ನಿವೃತ್ತಿ ಘೋಷಿಸಿದ ಎಂಪಿ ರೇಣುಕಾಚಾರ್ಯ

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ಬಿಜೆಪಿ ನಾಯಕ ಎಂಪಿ ರೇಣುಕಾಚಾರ್ಯ ಚುನಾವಣಾ ರಾಜಕೀಯ ನಿವೃತ್ತಿ ಘೋಷಿಸಿದ್ದಾರೆ. ಈ ಬಾರಿ ಚುನಾವಣೆಯಲ್ಲಿ ಸೋಲುಂಡ ಹಿನ್ನೆಲೆಯಲ್ಲಿ ರೇಣುಕಾಚಾರ್ಯ ಭಾವುಕರಾಗಿದ್ದು, ಯಾವುದೇ ಕಾರಣಕ್ಕೂ ಚುನಾವಣೆಗೆ ಬರುವುದಿಲ್ಲ ಎಂದು ಚುನಾವಣಾ ರಾಜಕೀಯ ನಿವೃತ್ತಿ ಘೋಷಿಸಿದ್ದಾರೆ.

ವಿಧಾನಸಭೆ ಚುನಾವಣೆ ಫಲಿತಾಂಶದ ಬಳಿಕ ಹೊನ್ನಾಳಿಯಲ್ಲಿ ಬೆಂಬಲಿಗರೊಂದಿಗೆ ಮಾತನಾಡಿದ ರೇಣುಕಾಚಾರ್ಯ, ಮುಂದಿನ ದಿನಗಳಲ್ಲಿ ಚುನಾವಣೆಗೆ ನಿಲ್ಲುವುದಿಲ್ಲ. ಪಕ್ಷ ಯಾರಿಗೆ ಟಿಕೆಟ್ ನೀಡಿದರೂ ಅವರ ಪರ ಕೆಲಸ ಮಾಡುತ್ತೇನೆ ಎಂದರು.

ಇವಿಎಂ ಮತಗಳ ಎಣಿಕೆಯಲ್ಲಿಯೂ ಶಾಂತನಗೌಡ ಅವರು ಗಮನಾರ್ಹ ಮುನ್ನಡೆ ಕಾಯ್ದುಕೊಂಡಿದ್ದರು. ಸುಮಾರು 14 ಸಾವಿರ ಮತಗಳ ಅಂತರದಿಂದ ಶಾಂತನಗೌಡ ಮುನ್ನಡೆ ಪಡೆದಿದ್ದರು. ರೇಣುಕಾಚಾರ್ಯ ಸೋಲು ಕಂಡಿದ್ದು, ಕಾಂಗ್ರೆಸ್‌ ಅಭ್ಯರ್ಥಿ ಡಿ.ಜಿ. ಶಾಂತನಗೌಡ ಗೆಲುವಿನ ನಗೆ ಬೀರಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!