BIG NEWS | ದೆಹಲಿ ಪೊಲೀಸರಿಂದ ಸಂಸದ ತೇಜಸ್ವಿ ಸೂರ್ಯ ವಿಚಾರಣೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌
ಕಳೆದ ಎರಡು ತಿಂಗಳ ಹಿಂದೆ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರೀವಾಲ್ ಮನೆ ಮುಂಭಾಗ ಧರಣಿ ನಡೆಸಿದ ಪ್ರಕರಣ ಸಂಬಂಧ ಸಂಸದ ತೇಜಸ್ವಿ ಸೂರ್ಯ ಅವರನ್ನು ವಿಚಾರಣೆಗೆ ಒಳಪಡಿಸಲಾಗಿದೆ.
ದೆಹಲಿ ಪೊಲೀಸರು ಅವರನ್ನು ವಿಚಾರಣೆ ನಡೆಸಿದ್ದಾರೆ. ಬಿಜೆಪಿ ಯುವ ಮೋರ್ಚಾವು ಕೇಜ್ರೀವಾಲ್ ಮನೆಗೆ ಮುತ್ತಿಗೆ ಹಾಕಿ ಮುಖ್ಯ ಗೇಟ್‌ನಲ್ಲಿ ಪ್ರತಿಭಟನೆ ನಡೆಸಿತ್ತು. ಈ ಸಂಬಂಧ ತೇಜಸ್ವಿ ಸೂರ್ಯ ಸಹಿತ ಎಂಟು ಮಂದಿ ಕಾರ್ಯಕರ್ತರನ್ನು ಬಂಧಿಸಲಾಗಿತ್ತು.
ಪೊಲೀಸರು ಬಂಧಿಸಿದ್ದರು. ಇದಾಗಿ ಎರಡು ತಿಂಗಳ ಬಳಿಕ ಪೊಲೀಸರು ವಿಚಾರಣೆಗೆ ಕರೆಯಲಾಗಿದೆ.
ತೇಜಸ್ವಿ ಸೂರ್ಯ ಅವರಿಗೆ ಸಿಆರ್‌ಪಿಸಿ ಸೆಕ್ಷನ್ 41 ಎ ಅಡಿಯಲ್ಲಿ ನೊಟೀಸ್ ಜಾರಿ ಮಾಡಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!