ಹೊಸದಿಗಂತ ಡಿಜಿಟಲ್ ಡೆಸ್ಕ್:
ಹಾವೇರಿ: ಕನ್ನಡ ಸಾಹಿತ್ಯ ಸಮ್ಮೇಳನದ ಕೊನೆ ದಿನದಂದು ಉಡುಪಿ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನತೀರ್ಥ ಸ್ವಾಮೀಜಿ ಪುಸ್ತಕ ಮಳಿಗೆಗೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಹೊಸದಿಗಂತದೊಂದಿಗೆ ಮಾತನಾಡಿದ ಅವರು, ಹಾವೇರಿ ಸಾಹಿತ್ಯ ಸಮ್ಮೇಳನ ಕಂಡು ಬಹಳ ಸಂತೋಷವಾಯಿತು. ಇಷ್ಟೊಂದು ಅಪಾರ ಸಂಖ್ಯೆಯಲ್ಲಿ ಸಾಹಿತ್ಯಾಸಕ್ತರು ಸೇರಿರುವುದು ಹೆಮ್ಮೆಯ ಸಂಗತಿ. ಸಾಹಿತ್ಯದ ಪ್ರಚಾರ ನಿರಂತರವಾಗಲಿ ಎಂದರು.