ಹೊಸದಿಗಂತ ವರದಿ, ಮಡಿಕೇರಿ:
ಮಡಿಕೇರಿಯಲ್ಲಿರುವ ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಗೆ ಎಂ.ಆರ್.ಐ.ಸ್ಕ್ಯಾನಿಂಗ್ ಯಂತ್ರ ಮಂಜೂರು ಮಾಡುವಂತೆ ಕೊಡಗು-ಮೈಸೂರು ಕ್ಷೇತ್ರದ ಸಂಸದ ಪ್ರತಾಪ್ ಸಿಂಹ ಅವರು ಮನವಿ ಮಾಡಿದ್ದಾರೆ.
ನವದೆಹಲಿಯಲ್ಲಿ ಕೇಂದ್ರ ಆರೋಗ್ಯ ಸಚಿವರಾದ ಡಾ. ಮನ್ಸುಖ್ ಮಾಂಡವಿಯಾ ಅವರನ್ನು ಮಂಗಳವಾರ ಭೇಟಿಯಾದ ಪ್ರತಾಪ್ ಸಿಂಹ ಅವರು, ಮೈಸೂರು ವೈದ್ಯಕೀಯ ಕಾಲೇಜು ವ್ಯಾಪ್ತಿಗೆ ಒಳಪಡುವ ಕೆಆರ್ ಆಸ್ಪತ್ರೆಗೆ ಹೊಸ ಒಪಿಡಿ ಬ್ಲಾಕ್ ನಿರ್ಮಾಣಕ್ಕೆ ಅನುದಾನ ಹಾಗೂ ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಗೆ ಎಂ.ಆರ್.ಐ ಸ್ಕ್ಯಾನಿಂಗ್ ಯಂತ್ರವನ್ನು ಮಂಜೂರು ಮಾಡುವಂತೆ ಕೋರಿದರು.
ತಮ್ಮ ಈ ಮನವಿಗೆ ಸಚಿವರು ಸಕಾರಾತ್ಮಕ ಭರವಸೆ ನೀಡಿದ್ದಾರೆ ಎಂದು ಸಂಸದ ಪ್ರತಾಪ್ ಸಿಂಹ ಅವರು ತಿಳಿಸಿದ್ದಾರೆ.