ಹೊಸದಿಗಂತ ಆನ್ ಲೈನ್ ಡೆಸ್ಕ್:
ಚುನಾವಣೆ ವೇಳೆ ಸ್ಪರ್ಧೆ ಮಾಡಿದ ಅಭ್ಯರ್ಥಿಗಳಿಗಿಂತ ನೋಟಾಗೆ ಹೆಚ್ಚು ಮತ ಬಿದ್ದರೆ ಆ ಚುನಾವಣೆಯನ್ನು ರದ್ದುಗೊಳಿಸುವ ವಿಚಾರವಾಗಿ ಅಭಿಪ್ರಾಯ ತಿಳಿಸುವಂತೆ ಸುಪ್ರೀಂ ಕೋರ್ಟ್, ಕೇಂದ್ರ ಸರ್ಕಾರ ಮತ್ತು ಚುನಾವಣಾ ಆಯೋಗಕ್ಕೆ ನೊಟೀಸ್ ಜಾರಿ ಮಾಡಿದೆ.
ನೋಟಾಗೆ ಹೆಚ್ಚು ಮತ ಬಿದ್ದರೆ ಆ ಚುನಾವಣೆಯನ್ನು ರದ್ದುಗೊಳಿಸ ಬೇಕೆಂದು ಕೋರಿ ಬಿಜೆಪಿ ನಾಯಕ, ಹಿರಿಯ ವಕೀಲ ಅಶ್ವಿನಿ ಉಪಾಧ್ಯಾಯ ಅವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಸುಪ್ರಿಂ ಕೋರ್ಟ್, ಈ ಕುರಿತು ಉತ್ತರ ನೀಡುವಂತೆ ಕೇಂದ್ರ ಸರ್ಕಾರ ಮತ್ತು ಚುನಾವಣಾ ಆಯೋಗಕ್ಕೆ ಸುಪ್ರೀಂ ನೊಟೀಸ್ ನೀಡಿದೆ.
ಒಂದು ಚುನಾವಣೆಯನ್ನು ಉಲ್ಲೇಖಿಸಿ ಹಿರಿಯ ವಕೀಲ ಅಶ್ವಿನಿ ಉಪಾಧ್ಯಾಯ ಈ ಅರ್ಜಿ ಸಲ್ಲಿಸಿದ್ದರು.
ಚುನಾವಣೆ ನಡೆದ ಸ್ಪರ್ಧೆ ಮಾಡಿದ ಅಭ್ಯರ್ಥಿಗಳಿಗಿಂತ ನೋಟಾಗೆ ಹೆಚ್ಚು ವೋಟ್ ಬಿದ್ದರೆ ಆ ಚುನಾವಣೆಯನ್ನು ರದ್ದುಗೊಳಿಸಬೇಕು ಮತ್ತು ಆ ಕ್ಷೇತ್ರಕ್ಕೆ ಹೊಸದಾಗಿ ಚುನಾವಣೆ ನಡೆಸಬೇಕು. ಈ ಸಂದರ್ಭದಲ್ಲಿ ಮೊದಲು ಸ್ಪರ್ಧಿಸಿದ್ದ ಅಭ್ಯರ್ಥಿಗಳು ಮರುಚುನಾವಣೆಯಲ್ಲಿ ಸ್ಪರ್ಧಿಸದಂತೆ ನಿರ್ಬಂಧಿಸಬೇಕು ಎಂದು ಅರ್ಜಿಯಲ್ಲಿ ಉಲ್ಲೇಖಿಸಲಾಗಿತ್ತು.