ಮುಡಾ ಹಗರಣ: ಸಿಎಂ ಸಿದ್ದು ವಿರುದ್ಧ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ವಾಗ್ದಾಳಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ವಾಲ್ಮೀಕಿ ಮತ್ತು ಮುಡಾ ಅಭಿವೃದ್ಧಿ ನಿಗಮ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಸಿದ್ದರಾಮಯ್ಯ ಅವರನ್ನು ತೀವ್ರವಾಗಿ ಟೀಕಿಸಿದ್ದಾರೆ. ಈ ಹಣವನ್ನು ಅಹಿಂದ ಎಂದು ಭಾವಿಸಿ ಎಸ್ಸಿ ಎಸ್ಟಿ ಖಾತ್ರಿ ಯೋಜನೆಗೆ ಬಳಸಿಕೊಂಡಿದ್ದಾರೆ ಎಂದು ಹೇಳಿದರು. ಸಿದ್ದರಾಮಯ್ಯನವರು ಭ್ರಷ್ಟರು, ಅಪ್ರಾಮಾಣಿಕರು ಎಂದು ಟೀಕಿಸಿದರು.

ಪ್ರಧಾನಿ ಮೋದಿ, ಜೋಶಿ ರಾಜೀನಾಮೆ ಕೊಡಬೇಕು ಎಂಬ ಲಾಡ್ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಇಂತಹ ಕ್ಷುಲ್ಲಕ ಅಥವಾ ಅಸಂಬದ್ಧ ಕಾಮೆಂಟ್‌ಗಳಿಗೆ ಪ್ರತಿಕ್ರಿಯಿಸಬಾರದು ಎಂದು ಹೇಳಿದರು.

ಇದು ದಪ್ಪ ಚರ್ಮದ ಸರ್ಕಾರ ಎಂದು ಟೀಕಿಸಿದ ಜೋಶಿ, ಸಿದ್ದರಾಮಯ್ಯ ರಾಜೀನಾಮೆ ಕೊಡಲೇಬೇಕು ಎಂದು ವಾಗ್ದಾಳಿ ನಡೆಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!