ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದ ಅಭಿವೃದ್ಧಿ ಯೋಜನೆಗಳಿಗೆ ಅನುದಾನ ಸೇರಿದಂತೆ ಇತರೆ ವಿಷಯಗಳ ಕುರಿತು ಚರ್ಚಿಸಲು ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಸಭೆ ನಡೆಸಲು ಶನಿವಾರ ಸಮಯ ನಿಗದಿಯಾಗಿದೆ, ಕೇಂದ್ರದ ವಿವಿಧ ಇಲಾಖೆಗಳ ಸಚಿವರನ್ನು ಭೇಟಿ ಮಾಡಲಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಗುರುವಾರ ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶನಿವಾರ ಸಭೆಗೆ ಪ್ರಧಾನಿ ಸಮಯ ನಿಗದಿ ಮಾಡಿದ್ದಾರೆ. ಭೂ ಸಾರಿಗೆ ಸಚಿವ ನಿತಿನ್ ಗಡ್ಕರಿ ಕೂಡ ಭೇಟಿಗೆ ಸಮಯ ಮೀಸಲಿಟ್ಟಿದ್ದಾರೆ. ಹಣಕಾಸು ಸಚಿವೆ ನಿರ್ಮಲಾ ಸೀತಾ ರಾಮನ್ ಅವರನ್ನು ಕೂಡ ಭೇಟಿ ಮಾಡಲಿದ್ದಾರೆ.
ಇನ್ನು ಗೃಹ ಸಚಿವ ಅಮಿತ್ ಶಾ ಅವರಿಗೆ ಸಮಯಾವಕಾಶ ನೀಡುವಂತೆ ಮನವಿ ಮಾಡಿದ್ದರೂ ಇನ್ನೂ ಕಾಲಾವಕಾಶ ನೀಡಿಲ್ಲ. ಶೀಘ್ರದಲ್ಲೇ ಕಾಲಾವಕಾಶ ನೀಡುವುದಾಗಿ ತಿಳಿಸಿದ್ದಾರೆ.