ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಮಲಾಕ್ಷಿ ವಿವಿಧೋದ್ದೇಶ ಸಹಕಾರ ಸಂಘದ ಅಧ್ಯಕ್ಷ ನಡೆಸಿರುವ ಬಹುಕೋಟಿ ವಂಚನೆ ಪ್ರಕರಣಕ್ಕೆ ಆರೋಪಿ ಬಿ.ವಿ.ಲಕ್ಷ್ಮೀ ನಾರಾಯಣನನ್ನು ಸೆನ್ ಠಾಣಾ ಪೊಲೀಸರು ಸೋಮವಾರ 5 ದಿನಗಳ ಕಾಲ ಪೋಲಿಸ್ ಕಸ್ಟಡಿಗೆ ಪಡೆದಿದ್ದಾರೆ.
ಆರೋಪಿಯನ್ನು ಬ್ರಹ್ಮಾವರದ ಮಟಪಾಡಿ ಬಂಧಿಸಿ ನ್ಯಾಯಾಲಯ ಹಾಜರು ಪಡಿಸಿದ್ದು, ಜ.11 ರವರೆಗೆ ನ್ಯಾಯಾಂಗ ಬಂಧನ ವಿಧಿಸಿತ್ತು. ಸೋಮವಾರ ಜಾಮೀನು ಅರ್ಜಿ ವಿಚಾರಣೆ ವೇಳೆ ಪೋಲಿಸರು ಹೆಚ್ಚಿನ ತನಿಖೆಗಾಗಿ ಪೋಲಿಸ್ ಕಸ್ಟಡಿಗೆ ಪಡೆದಿದ್ದಾರೆ.
ಈಗಾಗಲೇ ನ್ಯಾಯಾಲಯದಿಂದ ಸರ್ಚ್ ವಾರಂಟ್ ಪಡೆದು ತನಿಖೆಗೆ ಅಗತ್ಯ ಸ್ವತ್ತುಗಳನ್ನು ಸ್ವಾಧೀನಪಡಿಸಿಕೊಂಡು ಸಹಕಾರಿ ಸಂಘದ ಕಚೇರಿಯನ್ನು ಸೀಲ್ ಮಾಡಲಾಗಿದೆ.