ಮುಂಬೈ ದಾಳಿಯ ಸಂಚುಕೋರ ತಹವ್ವುರ್​ ರಾಣಾ ನ್ಯಾಯಾಂಗ ಬಂಧನ ವಿಸ್ತರಣೆ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಮುಂಬೈ ಭಯೋತ್ಪಾದಕ ದಾಳಿ (26/11)ಯ ಪ್ರಮುಖ ಸಂಚುಕೋರ ತಹವ್ವುರ್​ ಹುಸೇನ್ ರಾಣಾನ ನ್ಯಾಯಾಂಗ ಬಂಧನವನ್ನು ದೆಹಲಿ ನ್ಯಾಯಾಲಯವು ಆಗಸ್ಟ್ 13ರವರೆಗೆ ವಿಸ್ತರಿಸಿ ಬುಧವಾರ ಆದೇಶಿಸಿದೆ.

ಈ ಹಿಂದೆ ನೀಡಲಾಗಿದ್ದ ಜುಲೈ 9ರ ಅವಧಿ ಇಂದಿಗೆ ಮುಗಿದಿತ್ತು. ಸದ್ಯ ತಿಹಾರ್​ ಜೈಲಿನಲ್ಲಿರುವ ರಾಣಾನನ್ನು ವಿಡಿಯೋ ಕಾನ್ಫ್​​ರೆನ್ಸ್​ ಮೂಲಕ ಕೋರ್ಟ್ ಮುಂದೆ ಹಾಜರುಪಡಿಸಲಾಯಿತು. ವಿಶೇಷ ನ್ಯಾಯಾಧೀಶ ಚಂದರ್ ಜಿತ್ ಸಿಂಗ್ ಅವರು ಸಂಚುಕೋರನ ನ್ಯಾಯಾಂಗ ಬಂಧನ ಅವಧಿಯನ್ನು ವಿಸ್ತರಿಸಿದರು.

2011ರಲ್ಲಿ ಮುಂಬೈನಲ್ಲಿ ನಡೆದ ಭಯೋತ್ಪಾದಕ ದಾಳಿಯ ಪ್ರಮುಖ ಸಂಚುಕೋರ ಡೇವಿಡ್​ ಕೋಲ್ಮನ್​ ಹೆಡ್ಲಿಯ ಆಪ್ತನಾಗಿದ್ದ ರಾಣಾ, ಅಂದಿನ ದಾಳಿಗೆ ನೆರವು ನೀಡಿದ ಆರೋಪವಿದೆ. ಅಮೆರಿಕದ ವಶದಲ್ಲಿದ್ದ ತಹವ್ವುರ್ ರಾಣಾನನ್ನು ಭಾರತಕ್ಕೆ ಹಸ್ತಾಂತರಿಸುವಂತೆ ಅಲ್ಲಿನ ಸುಪ್ರೀಂ ಕೋರ್ಟ್​ನಲ್ಲಿ ಅರ್ಜಿ ಸಲ್ಲಿಸಲಾಗಿತ್ತು. ಇದನ್ನು ಅಂಗೀಕರಿಸಿದ್ದ ಕೋರ್ಟ್​ ಆತನನ್ನು ಏಪ್ರಿಲ್ 4ರಂದು ಭಾರತಕ್ಕೆ ಗಡಿಪಾರು ಮಾಡಿತ್ತು.

ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ರಾಣಾ ವಿರುದ್ಧ ಪೂರಕ ಆರೋಪಪಟ್ಟಿಯನ್ನು ಸಲ್ಲಿಸಿದೆ. ನ್ಯಾಯಾಲಯವು ಆಗಸ್ಟ್ 13 ರಂದು ಆರೋಪಪಟ್ಟಿಯನ್ನು ಪರಿಗಣಿಸಲಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!