ಹೊಸದಿಗಂತ ಡಿಜಿಟಲ್ ಡೆಸ್ಕ್: .
ಹನುಮಾನ್ ಚಾಲೀಸಾ ವಿವಾದಕ್ಕೆ ಸಂಬಂಧಿಸಿ ಈಗಾಗಲೇ ಬಂಧನಕ್ಕೊಳಗಾಗಿರುವ ರಾಣಾ ದಂಪತಿಗಳ ವಿರುದ್ಧ ದಾಖಲಾಗಿದ್ದ ಎಫ್ಐಆರ್ ರದ್ದುಗೊಳಿಸುವಂತೆ ಸಲ್ಲಿಕೆ ಮಾಡಿದ್ದ ಅರ್ಜಿ ವಜಾಗೊಂಡಿದೆ.
ತಮ್ಮ ಬಂಧನವನ್ನ ಪ್ರಶ್ನೆ ಮಾಡಿ, ಮುಂಬೈ ಹೈಕೋರ್ಟ್ನಲ್ಲಿ ಸಂಸದೆ ನವನೀತ್ ಕೌರ್ ಹಾಗೂ ಅವರ ಪತಿ ಶಾಸಕ ರವಿ ರಾಣಾ ಅರ್ಜಿ ಸಲ್ಲಿಕೆ ಮಾಡಿದ್ದರು. ಅದರ ವಿಚಾರಣೆ ನಡೆಸಿದ ಹೈಕೋರ್ಟ್ ವಜಾಗೊಳಿಸಿದೆ.
ರಾಣಾ ದಂಪತಿಗಳ ಬಂಧನಕ್ಕೆ ಬಂದ ಪೊಲೀಸ್ ಅಧಿಕಾರಿಯ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಇವರ ವಿರುದ್ಧ ಎಫ್ಐಆರ್ ದಾಖಲಾಗಿತ್ತು.
ನ್ಯಾಯಾಲಯವು ರಾಣಾ ದಂಪತಿಗೆ ಈಗಾಗಲೇ 14 ದಿನಗಳ ಕಾಲ ಜೈಲು ಶಿಕ್ಷೆ ವಿಧಿಸಿದ್ದು, ನವನೀತ್ ರಾಣಾ ಅವರನ್ನು ಮುಂಬೈನ ಬೈಕುಲ್ಲಾ ಜೈಲಿಗೆ ಮತ್ತು ಅವರ ಪತಿಯನ್ನು ನವಿ ಮುಂಬೈನ ತಲೋಜಾ ಜೈಲಿಗೆ ಕಳುಹಿಸಿದೆ.