ಹೊಸದಿಗಂತ ಡಿಜಿಟಲ್ ಡೆಸ್ಕ್:
ಮುಂಬೈನ್ ತಾಜ್ ಹೋಟೆಲ್ ಮೇಲಿನ ಉಗ್ರ ದಾಳಿಯ ಮಾಸ್ಟರ್ ಮೈಂಡ್ ತಹವ್ವೂರ್ ರಾಣಾನನ್ನು ಅಮೆರಿಕದಿಂದ ಗಡಿಪಾರು ಮಾಡಲಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ನಾಳೆ ಬೆಳಗಿನ ಜಾವ ಭಾರತಕ್ಕೆ ಕರೆತರುವ ನಿರೀಕ್ಷೆ ಇದೆ.
ದೆಹಲಿಗೆ ಕರೆತರಲಾಗುತ್ತದೆಯೇ ಅಥವಾ ಮುಂಬೈಗೆ ಕರೆತರಲಾಗುತ್ತದೆಯೇ ಎಂಬುದು ಇನ್ನು ಸ್ಪಷ್ಟವಾಗಿಲ್ಲ. ಆರಂಭಿಕ ಕೆಲವು ವಾರಗಳನ್ನು ಎನ್ಐಎ ಕಸ್ಟಡಿಯಲ್ಲಿ ಕಳೆಯುತ್ತಾರೆ ಎಂದು ಹೇಳಲಾಗಿದೆ.
ಭಾರತಕ್ಕೆ ರಾಣಾ ಹಸ್ತಾಂತರಿಸುವುದನ್ನು ನಿಲ್ಲಿಸುವಂತೆ ಒತ್ತಾಯಿಸಿ ಸಲ್ಲಿಸಲಾದ ಅರ್ಜಿಯನ್ನು ಅಮೆರಿಕದ ಸುಪ್ರೀಂ ಕೋರ್ಟ್ ತಿರಸ್ಕರಿಸಿತ್ತು. ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಜಾನ್ ರಾಬರ್ಟ್ಸ್ ಮುಂದೆ ಮಂಡಿಸಲಾಗಿತ್ತು.