ಸತತ 28 ಗಂಟೆಗಳ ಸುದೀರ್ಘ ಕಾರ್ಯಾಚರಣೆ ಬಳಿಕ ಮುಮ್ತಾಜ್ ಅಲಿ ಮೃತದೇಹ ಪತ್ತೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮಾಜಿ ಶಾಸಕ ಮೊಯಿದ್ದೀನ್ ಬಾವ ಅವರ ಸಹೋದರ ಮುಮ್ತಾಜ್ ಅಲಿ ನಾಪತ್ತೆಯಾಗಿದ್ದು, ಅವರ ಕಾರು ಮಂಗಳೂರಿನ ಕುಳೂರು ಸೇತುವೆ ಬಳಿ ಪತ್ತೆಯಾಗಿರುವುದು ಸಾಕಷ್ಟು ಅನುಮಾನಕ್ಕೆ ಕಾರಣವಾಗಿತ್ತು.

ಇದೀಗ ಮುಮ್ತಾಜ್ಅಲಿ ಶವ ಪತ್ತೆಯಾಗಿದೆ ಎಂಬ ಮಾಹಿತಿ ಹೊರಬಿದ್ದಿದೆ. ಮಂಗಳೂರಿನ ಕುಳೂರಿನ ಸೇತುವೆ ಬಳಿ ಮುಮ್ತಾಜ್ಅಲಿ ಮೃತದೇಹ ಪತ್ತೆಯಾಗಿದೆ. ಮುಳುಗು‌ ತಜ್ಞರು ಮೃತದೇಹವನ್ನು ಹೊರತೆಗೆದಿದ್ದಾರೆ.

ಮೊಯಿದ್ದೀನ್ ಬಾವ ಅವರ ಸಹೋದರ ಮುಮ್ತಾಜ್ಅಲಿ(52) ಏಕಾಏಕಿ ನಾಪತ್ತೆಯಾಗಿದ್ದರು, ಮುಮ್ತಾಜ್ಅಲಿ ಅವರೇ ಕಾರನ್ನು ಚಲಾಯಿಸಿಕೊಂಡು ಹೋಗಿದ್ದಾರೆ ಎನ್ನಲಾಗಿದ್ದು, ನಿನ್ನೆ ಅವರ BMW ಕಾರು ಕುಳೂರು ಸೇತುವೆ ಮೇಲೆ ಡ್ಯಾಮೇಜ್ ಆಗಿರುವ ಸ್ಥಿತಿಯಲ್ಲಿ ಪತ್ತೆಯಾಗಿತ್ತು.

ನಂತರ ಶವಕ್ಕಾಗಿ ಪೊಲೀಸರು ತೀವು ಹುಡುಕಾಟ ನಡೆಸಿದ್ದರು. ಇದೀಗ ಕೂಳೂರಿನ ಸೇತುವೆ ಬಳಿ ಮುಮ್ತಾಜ್ಅಲಿ ಶವ ಪತ್ತೆಯಾಗಿದೆ. ಸೇತುವೆಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರಾ. ಅಥವಾ ಅಪಘಾತ ನಡೆದಿದ್ಯಾ ಎಂಬುದು ತನಿಖೆಯಿಂದಷ್ಟೇ ಗೊತ್ತಾಗಬೇಕಿದೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!