ಹೊಸದಿಗಂತ ಡಿಜಿಟಲ್ ಡೆಸ್ಕ್:
ಮುಂಡ್ಕಾ ಮೆಟ್ರೋ ನಿಲ್ದಾಣದ ಬಳಿಯ ನಾಲ್ಕು ಅಂತಸ್ತಿನ ಕಚೇರಿ ಸಂಕೀರ್ಣದಲ್ಲಿ ಬೆಂಕಿ ಕಾಣಿಸಿಕೊಂಡು 27 ಜನರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಟ್ಟಡದ ಮಾಲೀಕರನ್ನು ದೆಹಲಿ ಪೊಲೀಸರು ಭಾನುವಾರ ಬಂಧಿಸಿದ್ದಾರೆ. ಕಟ್ಟಡದ ಮಾಲೀಕ ಮನೀಶ್ ಲಾಕ್ರಾ ಘಟನೆಯ ನಂತರ ತಲೆಮರೆಸಿಕೊಂಡಿದ್ದು, ಆತನಿಗಾಗಿ ದೆಹಲಿ ಮತ್ತು ಹರಿಯಾಣದಲ್ಲಿ ಬಲೆ ಬೀಸಿದ್ದ ಪೊಲೀಸರಿಗೆ ಕೊನೆಗೂ ಸಿಕ್ಕಿಬಿದ್ದಿದ್ದಾನೆ.
ಈ ಪ್ರಕರಣದಲ್ಲಿ ಕಂಪನಿ ಮಾಲೀಕರಾದ ಹರೀಶ್ ಗೋಯೆಲ್ ಮತ್ತು ವರುಣ್ ಗೋಯೆಲ್ ಅವರನ್ನು ಪೊಲೀಸರು ಶನಿವಾರ ಬಂಧಿಸಿದ್ದಾರೆ. ಭಾರತೀಯ ದಂಡ ಸಂಹಿತೆ 304, 308, 120, 34 ಸೆಕ್ಷನ್ಗಳ ಅಡಿಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ. ತನಿಖೆಯಲ್ಲಿ ತಪ್ಪಿತಸ್ಥರೆಂದು ಕಂಡುಬಂದಲ್ಲಿ ಇವರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಉಪ ಪೊಲೀಸ್ ಆಯುಕ್ತ ಸಮೀರ್ ಶರ್ಮಾ ತಿಳಿಸಿದ್ದಾರೆ.