ಹೊಸದಿಗಂತ ವರದಿ ವಿಜಯಪುರ:
ಕೊಲೆ ಆರೋಪಿ ಕಾಲಿಗೆ ಪೊಲೀಸರು ಗುಂಡು ಹಾರಿಸಿ, ಬಂಧಿಸಿರುವ ಘಟನೆ ನಗರ ಹೊರ ವಲಯ ಇಟ್ಟಂಗಿಹಾಳ ಬಳಿ ನಡೆದಿದೆ.
ಚಡಚಣ ತಾಲೂಕಿನ ಗೋವಿಂದಪುರದಲ್ಲಿ 6 ಜನರ ಹತ್ಯಾಕಾಂಡ ಪ್ರಕರಣದ ಮತ್ತೊಬ್ಬ ಮುಖ್ಯ ಆರೋಪಿ ಮಹೇಶ್ ತಳವಾರ್ ನನ್ನು ಬಂಧಿಸಲು ಹೋದಾಗ, ಆರೋಪಿ ಮಹೇಶ ಪೊಲೀಸರ ಮೇಲೆ ಹಲ್ಲೆ ಮಾಡಿದ್ದಾನೆ. ಆಗ ಪೊಲೀಸರು ಎರಡು ಬಾರಿ ಗಾಳಿಯಲ್ಲಿ ಗುಂಡು ಹಾರಿಸಿ ಎಚ್ಚರಿಕೆ ನೀಡಿದ್ದಾರೆ.
ಇದನ್ನೂ ಓದಿ:
ಆದರೂ ಆರೋಪಿ ಓಡಿ ಹೋಗಲು ಯತ್ನಿಸಿದಾಗ ಕಾಲಿಗೆ ಗುಂಡು ಹಾರಿಸಿ ಮಹೇಶನ ಬಂಧನ ಮಾಡಿದ್ದಾರೆ. ಈ ಘಟನೆಯಲ್ಲಿ ಆರೋಪಿ ಮಹೇಶ ಹಾಗೂ ಇಬ್ಬರು ಪೊಲೀಸರಿಗೆ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ವಿಜಯಪುರ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.



