ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜಸ್ತಾನದಲ್ಲಿ ನೂಪುರ್ ಶರ್ಮಾ ಪರವಾಗಿ ಪೋಸ್ಟ್ ಹಾಕಿದ್ದ ವ್ಯಕ್ತಿಯ ಶಿರಚ್ಚೇದ ಮಾಡಿ, ಪ್ರಧಾನಿಗೆ ಜೀವ ಬೆದರಿಕೆ ಹಾಕಿದ ಘಟನೆ ದೇಶವನ್ನೇ ನಡುಗಿಸಿದ್ದು, ರಾಜಸ್ಥಾನದಲ್ಲಿ ಭಾರಿ ಅಲ್ಲೋಲ ಕಲ್ಲೋಲ ಸೃಷ್ಟಿಸಿದೆ. ಇದೀಗ ಒಂದು ತಿಂಗಳವರೆಗೂ 144 ಸೆಕ್ಷನ್ ಜಾರಿ ಮಾಡಲಾಗಿದ್ದು, ರಾಷ್ಟ್ರೀಯ ತನಿಖಾ ದಳ(ಎನ್ಐಎ) ಅಖಾಡಕ್ಕಿಳಿದಿದೆ.
ಎನ್ಐಎ ತಂಡ ಡೆಪ್ಯುಟಿ ಇನ್ಸ್ಪೆಕ್ಟರ್ ಜನರಲ್ ಶ್ರೇಣಿಯ ಅಧಿಕಾರಿಯ ನೇತೃತ್ವದಲ್ಲಿ ಉದಯಪುರಕ್ಕೆ ಆಗಮಿಸಿದೆ. ತಕ್ಷಣ ಶಾಂತಿ ನೆಲೆಸಲು ಮತ್ತು ಘಟನೆಯನ್ನು ತೀವ್ರ ತನಿಖೆ ನಡೆಸಲು ಗೃಹ ಸಚಿವಾಲಯ ಸೂಚನೆಯ ಮೇರೆಗೆ ಎನ್ಐಎ ರಾಜ್ಯಕ್ಕೆ ಆಗಮಿಸಿದೆ.