ಹೊಸದಿಗಂತ ವರದಿ, ಚಿಕ್ಕೋಡಿ
ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನೊಬ್ಬನನ್ನು ಬರ್ಬರವಾಗಿ ಹತ್ಯೆಗೈದು ಕಬ್ಬಿನ ಗದ್ದೆಯೊಂದರಲ್ಲಿ ಎಸೆದು ಪರಾರಿಯಾದ ಘಟನೆ ಯಡೂರವಾಡಿ ಗ್ರಾಮದಲ್ಲಿ ನಡೆದಿದೆ.
ಚಿಕ್ಕೋಡಿ ತಾಲೂಕಿನ ಯಡೂರುವಾಡಿ ಗ್ರಾಮದ ಅನೀಲ್ ಸವಳೆ(30) ಕೊಲೆಯಾದ ದುರ್ದೈವಿ. ಅಪರಿಚಿತ ದುಷ್ಕರ್ಮಿಗಳು ಅನೀಲ್ ರನ್ನು ಹೊರವಲಯದಲ್ಲಿರುವ ಕಬ್ಬಿನ ಗದ್ದೆಯಲ್ಲಿ ಕೊಲೆ ಮಾಡಿ ಪರಾರಿಯಾಗಿದ್ದಾರೆ ಎಂಬ ಮಾಹಿತಿ ಸಿಕ್ಕಿದೆ. ಹತ್ಯೆಗೆ ಕಾರಣ ತಿಳಿದುಬಂದಿಲ್ಲ. ಅಂಕಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ