ಬಜರಂಗದಳದ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣ: ಈವರೆಗೆ 6 ಮಂದಿ ಬಂಧನ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಶಿವಮೊಗ್ಗದಲ್ಲಿ ಬಜರಂಗದಳದ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣ ಸಂಬಂಧ ಈವರೆಗೆ 6 ಮಂದಿಯನ್ನು ಬಂಧಿಸಲಾಗಿದ ಎಂಬುದಾಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ಎಂ ಲಕ್ಷ್ಮೀಪ್ರಸಾದ್ ತಿಳಿಸಿದ್ದಾರೆ.
ಈ ಕುರಿತಂತೆ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ ಅವರು, ಎ1, ಎ3, ಎ4 ಮತ್ತು ಎ5 ಆರೋಪಿಗಳು ಹರ್ಷನನ್ನು ಹತ್ಯೆ ಮಾಡಲಾಗಿದೆ. ಮೊದಲು ಕಾಸೀಮ್, ನದೀಮ್ ಬಂಧಿಸಲಾಗಿತ್ತು. ಉಳಿದ ನಾಲ್ವರು ಆರೋಪಿಗಳು ಸೇರಿದಂತೆ ಆರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಸ್ಪಷ್ಟ ಪಡಿಸಿದರು.
ಬಂಧಿತ ಆರೋಪಿಗಳನ್ನು ಎ1 ಮೊಹಮ್ಮದ್ ಖಾಸಿಪ್, ಎ2 ಸೈಯದ್ ನದೀಮ್, ಎ3 ಆಸೀಫ್ ಉಲ್ಲಾ ಖಾನ್, ಎ4 ರಿಹಾನ್ ಷರೀಫ್, ಎ5 ನಿಹಾನ್ ಮತ್ತು ಎ6 ಅಭ್ದುಲ್ ಅಫ್ನನ್ ಎಂಬುವವರನ್ನು ಈವರೆಗೆ 6 ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಹೇಳಿದರು.
ಇನ್ನು ಇದುವರೆಗೆ 13 ಎಫ್‌ಐಆರ್ ದಾಖಲಾಗಿದೆ. ಇನ್ನೂ ತನಿಖೆ ನಡೆಯುತ್ತಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!