ಹೊಸದಿಗಂತ ಡಿಜಿಟಲ್ ಡೆಸ್ಕ್:
ಜಮ್ಮು ಕಾಶ್ಮೀರದಲ್ಲಿ ಹಿಂದುಗಳನ್ನು ಗುರಿಯಾಗಿಸಿ ಕೊಲೆ ಮಾಡುತ್ತಿರುವುದು ಮುಂದುವರೆದಿದ್ದು ಕುಲ್ಗಾಮ್ ನಲ್ಲಿ ಬ್ಯಾಂಕ್ ಮ್ಯಾನೇಜರ್ ಒಬ್ಬರನ್ನು ಗುಂಡಿಕ್ಕಿ ಕೊಲ್ಲಲಾಗಿದೆ.
ದಕ್ಷಿಣ ಕಾಶ್ಮೀರದ ಕುಲ್ಗಾಮ್ ಜಿಲ್ಲೆಯ ಮೋಹನ್ ಪೋರಾದಲ್ಲಿರುವ ಎಲ್ಲಕ್ವೈ ದೇಹತಿ ಬ್ಯಾಂಕ್ನಲ್ಲಿ ಕೆಲಸ ಮಾಡುವ ವಿಜಯ್ ಕುಮಾರ್ ಎಂಬುವವರ ಮೇಲೆ ಭಯೋತ್ಫಾದಕರು ಗುಂಡಿನ ದಾಳಿ ನಡೆಸಿದ್ದಾರೆ. ತಕ್ಷಣವೇ ಅವರನ್ನು ಆಸ್ಪತ್ರೆಗೆ ರವಾನಿಸಿದರೂ ಚಿಕಿತ್ಸೆ ಫಲಕಾರಿಯಾಗದೇ ಅವರು ಕೊನೆಯುಸಿರೆಳೆದಿದ್ದಾರೆ. ಅವರು ರಾಜಸ್ಥಾನ ಮೂಲದ ಹನುಮಾನ್ ಗಢದವರೆಂದು ಹೇಳಲಾಗಿದೆ.
ಕಾಶ್ಮೀರದಲ್ಲಿ ಹಿಂದುಗಳನ್ನು ಉದ್ದೇಶಿಸಿ ಕೊಲೆ ಮಾಡಲಾಗುತ್ತಿರುವ ಘಟನೆಗಳು ಹೆಚ್ಚುತ್ತಿದ್ದು ರಾಹುಲ್ ಭಟ್, ನಟಿ ಅಮ್ರೀನ್ ಭಟ್, ಶಿಕ್ಷಕಿ ರಜನಿ ಭಾಲಾ ಈಗ ವಿಜಯ ಕುಮಾರ್ ಭಯೊತ್ಪಾದಕರ ಗುಂಡೇಟಿಗೆ ಬಲಿಯಾಗಿದ್ದಾರೆ.