ಪತ್ನಿಯಿಂದಲೇ ಪತಿಯ ಹತ್ಯೆ: ಆರೋಪಿ ಮಹಿಳೆ ಬಂಧನ

ಹೊಸದಿಗಂತ ವರದಿ, ಮಡಿಕೇರಿ:

ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಪತ್ನಿಯೇ ಪತಿಯನ್ನು ಹತ್ಯೆ ಮಾಡಿದ ಘಟನೆ ವೀರಾಜಪೇಟೆ ತಾಲೂಕಿನ ಬೊಳ್ಳುಮಾಡುವಿನಲ್ಲಿ ನಡೆದಿದೆ.
ಗ್ರಾಮದ ಕಾಫಿ ತೋಟದ ಲೈನ್’ಮನೆಯಲ್ಲಿ ವಾಸವಿದ್ದ ಸುಂದರ (36) ಎಂಬವರೇ ತಮ್ಮ ಪತ್ನಿಯಿಂದ ಹತ್ಯೆಗೀಡಾದವರಾಗಿದ್ದಾರೆ.
ಕಾಫಿ ತೋಟದ ಲೈನ್ ಮನೆಯಲ್ಲಿ ತಮ್ಮ ಎರಡು ಮಕ್ಕಳೊಂದಿಗೆ ವಾಸವಾಗಿದ್ದ ದಂಪತಿ ನಡುವೆ ಆಗಾಗ ಜಗಳ ನಡೆಯುತ್ತಿತ್ತೆನ್ನಲಾಗಿದ್ದು, ಇದು ತಾರಕಕ್ಕೇರಿದ ಸಂದರ್ಭ ಕತ್ತಿಯಿಂದ ಕಡಿದು ಹತ್ಯೆ ಮಾಡಿದ ಪತ್ನಿ, ಬಳಿಕ ವೇಲ್’ನಿಂದ ಕುತ್ತಿಗೆ ಬಿಗಿದು ತನ್ನ ಪತಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಬಿಂಬಿಸಲು ಯತ್ನಿಸಿದ್ದಾಗಿ ಹೇಳಲಾಗಿದೆ.
ಸುಂದರ ಅವರ ಸಾವಿನ ಬಗ್ಗೆ ಶಂಕೆ ವ್ಯಕ್ತಪಡಿಸಿದ ಕುಟುಂಬಸ್ಥರು ಈ ಬಗ್ಗೆ ತನಿಖೆ ನಡೆಸುವಂತೆ ಒತ್ತಾಯಿಸಿದ್ದು, ಇದೀಗ ವೀರಾಜಪೇಟೆ ಪೊಲೀಸರು ಸ್ಥಳಕ್ಕೆ ಭೇಟಿ ನೋಡಿ, ಆರೋಪಿ ಮಹಿಳೆ ಶೋಭಾ‌ ಎಂಬಾಕೆಯನ್ನು ಬಂಧಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!