ಹೊಸದಿಗಂತ ಡಿಜಿಟಲ್ ಡೆಸ್ಕ್:
ದೇಶದ 15ನೇ ರಾಷ್ಟ್ರಪತಿಯಾಗಿ ಆಯ್ಕೆಯಾಗಿರುವ ದ್ರೌಪದಿ ಮುರ್ಮು ಅವರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಭಿನಂದನೆ ತಿಳಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಭಾರತದ ರಾಷ್ಟ್ರಪತಿ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಭಾರಿ ಬಹುಮತದೊಂದಿಗೆ ಆಯ್ಕೆಯಾಗಿ ಹೊಸ ದಾಖಲೆ ಬರೆದ ದ್ರೌಪದಿ ಮುರ್ಮು ಅವರಿಗೆ ಹಾರ್ದಿಕ ಅಭಿನಂದನೆಗಳು. ಸಮಾಜದ ಕೆಳಸ್ತರದಿಂದ ಬಂದು ರಾಷ್ಟ್ರದ ಪರಮೋನ್ನತ ಹುದ್ದೆಯನ್ನು ಅವರು ಅಲಂಕರಿಸುತ್ತಿರುವುದು ನಮ್ಮ ಪ್ರಜಾಪ್ರಭುತ್ವದ ಯಶಸ್ಸಿನ ಸಂಕೇತ ಎಂದು ಬರೆದುಕೊಂಡಿದ್ದಾರೆ.
ಭಾರತದ ರಾಷ್ಟ್ರಪತಿ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಭಾರೀ ಬಹುಮತದೊಂದಿಗೆ ಆಯ್ಕೆಯಾಗಿ ಹೊಸ ದಾಖಲೆ ಬರೆದ ಶ್ರೀಮತಿ ದ್ರೌಪದಿ ಮುರ್ಮು ಅವರಿಗೆ ಹಾರ್ದಿಕ ಅಭಿನಂದನೆಗಳು. ಸಮಾಜದ ಕೆಳಸ್ತರದಿಂದ ಬಂದು ರಾಷ್ಟ್ರದ ಪರಮೋನ್ನತ ಹುದ್ದೆಯನ್ನು ಅವರು ಅಲಂಕರಿಸುತ್ತಿರುವುದು ನಮ್ಮ ಪ್ರಜಾಪ್ರಭುತ್ವದ ಯಶಸ್ಸಿನ ಸಂಕೇತ.
1/2 pic.twitter.com/3S8UQpLJSQ— Basavaraj S Bommai (@BSBommai) July 21, 2022