ಮುರ್ಷಿದಾಬಾದ್ ಹಿಂಸಾಚಾರ: ಗಡಿ ಭದ್ರತಾ ಪಡೆಗಳ ಮೇಲೆ ಗುಂಡಿನ ದಾಳಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ವಕ್ಫ್ ತಿದ್ದುಪಡಿ ಕಾಯ್ದೆಯ ವಿರುದ್ಧ ಪಶ್ಚಿಮ ಬಂಗಾಳದ ಮುರ್ಷಿದಾಬಾದ್ ಜಿಲ್ಲೆಯಲ್ಲಿ ನಡೆಯುತ್ತಿರುವ ಹಿಂಸಾಚಾರ ತಡೆಯಲು ಪೊಲೀಸ್ ಇಲಾಖೆ ಹರಸಾಹಸ ಪಡುತ್ತಿದೆ.

ಈ ಮಧ್ಯೆ ಧುಲಿಯನ್ ಪ್ರದೇಶದಿಂದ ಮತ್ತೆ ಗುಂಡಿನ ದಾಳಿ ನಡೆದ ವರದಿಗಳು ಬಂದಿವೆ. ಮಾಹಿತಿಯ ಪ್ರಕಾರ, ದುಷ್ಕರ್ಮಿಗಳು ಗಡಿ ಭದ್ರತಾ ಪಡೆ ತಂಡವನ್ನು ಗುರಿಯಾಗಿಸಿಕೊಂಡು ಗುಂಡು ಹಾರಿಸಿದ್ದಾರೆ ಎನ್ನಲಾಗಿದೆ. ಇದರಲ್ಲಿ ಇಬ್ಬರು ಅಮಾಯಕ ಮಕ್ಕಳು ಗಾಯಗೊಂಡಿದ್ದಾರೆ ಎನ್ನುವ ಮಾಹಿತಿ ಲಭಿಸಿದೆ.

ಆದಾಗ್ಯೂ, ಜಿಲ್ಲೆಯ ಇತರ ಸೂಕ್ಷ್ಮ ಪ್ರದೇಶಗಳಿಂದ ಇದುವರೆಗೆ ಯಾವುದೇ ಹೊಸ ಅಹಿತಕರ ಘಟನೆಗಳು ವರದಿಯಾಗಿಲ್ಲ. ಆಡಳಿತವು ಪರಿಸ್ಥಿತಿಯ ಮೇಲೆ ನಿರಂತರ ನಿಗಾ ಇಟ್ಟಿದೆ. ಶಾಂತಿಯನ್ನು ಪುನಃಸ್ಥಾಪಿಸುವ ಪ್ರಯತ್ನಗಳ ಭಾಗವಾಗಿ, ಜಿಲ್ಲಾಡಳಿತವು ಇಂದು ಸುತಿ ಪ್ರದೇಶದ ಎಲ್ಲಾ ಸಂಘಟನೆಗಳ ಪ್ರತಿನಿಧಿಗಳೊಂದಿಗೆ ಶಾಂತಿ ಸಭೆ ನಡೆಸಲು ನಿರ್ಧರಿಸಿದೆ.

ವಕ್ಫ್ ತಿದ್ದುಪಡಿ ಕಾಯ್ದೆಯ ವಿರುದ್ಧ ಭುಗಿಲೆದ್ದ ಹಿಂಸಾಚಾರದಲ್ಲಿ ಜಿಲ್ಲೆಯ ವಿವಿಧ ಪ್ರದೇಶಗಳಿಂದ ಇಲ್ಲಿಯವರೆಗೆ 150 ಕ್ಕೂ ಹೆಚ್ಚು ಜನರನ್ನು ಬಂಧಿಸಲಾಗಿದೆ.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!