ಹೊಸದಿಗಂತ ಡಿಜಿಟಲ್ ಡೆಸ್ಕ್:
ನಾಡಿನ ಹಿರಿಯ ರಂಗಭೂಮಿ ಕಲಾವಿದ, ‘ಮೂರು ಮುತ್ತು’ ಖ್ಯಾತಿಯ ನಟ ಅಶೋಕ್ ಶ್ಯಾನುಭಾಗ್ ನಿಧನರಾಗಿದ್ದಾರೆ. ಅಲ್ಪಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಅವರಿಗೆ 54 ವರ್ಷ ವಯಸ್ಸಾಗಿತ್ತು.
ಕುಂದಾಪುರದ ಪಟ್ಟಣ್ ಶೇಟ್, ಹುಲಿಮನೆ ದಿ. ನಾರಾಯಣ ಶ್ಯಾನುಭೋಗ್ ಹಾಗೂ ದಿ. ಕಸ್ತೂರಿ ಶ್ಯಾನುಭಾಗ್ ದಂಪತಿಯ ಪುತ್ರರಾಗಿರುವ ಇವರು 1979ರಲ್ಲಿ ರೂಪಕಲಾ ಸಂಸ್ಥೆಯಲ್ಲಿ ಬಾಲ ಕಲಾವಿದರಾಗಿ ರಂಗಭೂಮಿಗೆ ಕಾಲಿಟ್ಟಿದ್ದರು. ರೂಪಕಲಾ ಸಂಸ್ಥೆಯ ದಿ. ಬಾಲಕೃಷ್ಣ ಪೈ (ಕುಳ್ಳಪ್ಪು) ಅವರ ನೆಚ್ಚಿನ ಶಿಷ್ಯರಾಗಿದ್ದ ಇವರು ಕುಳ್ಳಪ್ಪು ಅವರ 53 ನಾಟಕಗಳಲ್ಲಿ ಹಾಗೂ ಸತೀಶ್ ಪೈ ಅವರ 11 ನಾಟಕಗಳಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ.
ಮೂರು ಮುತ್ತು, ಅವನಲ್ಲ ಇವನು, ಪಾಪ ಪಾಂಡು, ಅಳುವುದೋ ನಗುವುದೋ, ರಾಮ ಕೃಷ್ಣ ಗೋವಿಂದ ಮೊದಲಾದ ನಾಟಕಗಳು ಇವರಿಗೆ ಪ್ರಸಿದ್ಧಿ ತಂದಿದ್ದವು.