ಬಸವರಾಜ ಪಾಟೀಲ ಸೇಡಂರನ್ನು ಭೇಟಿಮಾಡಿ ಆಶೀರ್ವಾದ ಪಡೆದ ಮುರುಗೇಶ್ ನಿರಾಣಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ 
ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಶ್ರೀ ಮುರುಗೇಶ್ ಆರ್ ನಿರಾಣಿ ಅವರು ಗುರು ಪೂರ್ಣಿಮೆಯ ದಿನದಂದು ಬಿಜೆಪಿಯ ಹಿರಿಯ ಮುಖಂಡರು ಮತ್ತು ಕಲಬುರಗಿಯ ಕಲ್ಯಾಣ ಕರ್ನಾಟಕ ಮಾನವ ಸಂಪನ್ಮೂಲ ಕೃಷಿ ಹಾಗೂ ಸಾಂಸ್ಕೃತಿಕ ಸಂಘದ ಗೌರವಾಧ್ಯಕ್ಷರಾದ ಬಸವರಾಜ್ ಪಾಟೀಲ್ ಸೇಡಂ ಅವರನ್ನು ಕಲಬುರಗಿಯ ಅವರ ನಿವಾಸದಲ್ಲಿ ಭೇಟಿ ಮಾಡಿ ಅವರಿಂದ ಆಶೀರ್ವಾದವನ್ನು ಪಡೆದುಕೊಂಡರು.
ಈ ವೇಳೆ ಮಾತನಾಡಿದ ನಿರಾಣಿ, ಗುರುಪೂರ್ಣಿಮೆಯ ದಿನದಂದು ಶ್ರೀ ಬಸವರಾಜ್ ಪಾಟೀಲ್ ಸೇಡಂ ಅವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದುಕೊಂಡಿದ್ದು ಖುಷಿಯಾಗಿದೆ. ಅವರು ಬಿಜೆಪಿ ಕಂಡ ಅದ್ಭುತ ರಾಜಕಾರಣಿ ಹಾಗೂ ನಿಷ್ಠಾವಂತ ಕಾರ್ಯಕರ್ತರಾಗಿದ್ದಾರೆ. ಅವರು ಹಾಕಿಕೊಟ್ಟ ದಾರಿ ಹಾಗೂ ಆಡಳಿತದ ಕಾರ್ಯವೈಖರಿ ನಮ್ಮೆಲ್ಲರಿಗೂ ಮಾದರಿಯಾಗಿದೆ ಎಂದರು. ಈ ವೇಳೆ ಶಾಸಕ ದತ್ತಾತ್ರೇಯ ಚಂದ್ರಶೇಖರ್ ಪಾಟೀಲ್ ರೇವೂರ್ ಹಾಗೂ ಇತರರು ಉಪಸ್ಥಿತರಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!