ಹೊಸದಿಗಂತ ವರದಿ, ಚಿತ್ರದುರ್ಗ:
ನಗರದ ಶ್ರೀ ಮುರುಘಾಮಠ ಹಾಗೂ ಶ್ರೀ ಜಗದ್ಗುರು ಮುರುಘರಾಜೇಂದ್ರ ವಿದ್ಯಾಪೀಠದ ಆಡಳಿತಾಧಿಕಾರಿಗಳಾಗಿ ಕಾರ್ಯ ನಿರ್ವಹಿಸುತ್ತಿದ್ದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಕೆ.ಬಿ.ಗೀತಾ ಅವರು ಮುರುಘಾಮಠದ ಪೀಠಾಧಿಪತಿ ಹಾಗೂ ಎಸ್.ಜೆ.ಎಂ. ವಿದ್ಯಾಪೀಠದ ಅಧ್ಯಕ್ಷರಾದ ಶಿವಮೂರ್ತಿ ಮುರುಘಾ ಶರಣರಿಗೆ ಶ್ರೀ ಮುರುಘಾಮಠ ಹಾಗೂ ಶ್ರೀ ಜಗದ್ಗುರು ಮುರುಘರಾಜೇಂದ್ರ ವಿದ್ಯಾಪೀಠದ ಆಡಳಿತವನ್ನು ಹಸ್ತಾಂತರಿಸಿದ್ದಾರೆ.
ನಗರದ ಶ್ರೀ ಜಗದ್ಗುರು ಮುರುಘರಾಜೇಂದ್ರ ವಿದ್ಯಾಪೀಠದ ಕಾರ್ಯನಿರ್ವಹಣಾಧಿಕಾರಿಗಳಾಗಿ ಸೇವೆ ಸಲ್ಲಿಸುತ್ತಿದ್ದ ಎಂ. ಭರತ್ಕುಮಾರ್ ಅವರನ್ನು ಎಸ್.ಜೆ.ಎಂ. ವಿದ್ಯಾಪೀಠ ಹಾಗೂ ಎಸ್.ಜೆ.ಎಂ. ವಿಶ್ವವಿದ್ಯಾಲಯದ ಕರ್ತವ್ಯಗಳಿಂದ ಡಿ.೮ ರಿಂದ ತಕ್ಷಣ ಜಾರಿಗೆ ಬರುವಂತೆ ಶ್ರೀ ಮುರುಘರಾಜೇಂದ್ರ ಬೃಹನ್ಮಠದ ಪೀಠಾಧ್ಯಕ್ಷರಾದ ಡಾ. ಶಿವಮೂರ್ತಿ ಮುರುಘಾ ಶರಣರು ಬಿಡುಗಡೆಗೊಳಿಸಿ ಆದೇಶಿಸಿದ್ದಾರೆ ಎಂದು ಶ್ರೀಮಠದ ಉಸ್ತುವಾರಿಗಳಾದ ಶ್ರೀ ಬಸವಪ್ರಭು ಸ್ವಾಮೀಜಿ ತಿಳಿಸಿದ್ದಾರೆ.