ಹೊಸದಿಗಂತ ವರದಿ ಮೈಸೂರು
ಯುಗಾದಿ ಹಬ್ಬದ ಪ್ರಯುಕ್ತ ಏಪ್ರಿಲ್ 2ರಿಂದ ಏಪ್ರಿಲ್ 5ರವರೆಗೆ ಮೈಸೂರಿನ ಅಂಬಾ ವಿಲಾಸ ಅರಮನೆ ಆವರಣದಲ್ಲಿ ಯುಗಾದಿ ಸಂಗೀತೋತ್ಸವ ಆಯೋಜಿಸಲಾಗಿದೆ ಎಂದು ಅರಮನೆ ಮಂಡಳಿಯ ಉಪ ನಿರ್ದೇಶಕ ಸುಬ್ರಮಣ್ಯ ತಿಳಿಸಿದ್ದಾರೆ.
ಯುಗಾದಿ ಹಬ್ಬದ ಪ್ರಯುಕ್ತ ಮೂರು ದಿನಗಳ ಕಾಲ ಸಂಗೀತ ರಸಸಂಜೆ ಕಾರ್ಯಕ್ರಮ ಆಯೋಜನೆ ಮಾಡಲಾಗಿದ್ದು, ಸಂಜೆ.7ರಿಂದ 8ರವರೆಗೆ ಕಾರ್ಯಕ್ರಮ ನಡೆಯಲಿದೆ.
ಗಾಯಕಿ ಅನನ್ಯ ಭಟ್, ಕೊಳಲು ವಾದಕ ಪ್ರವೀಣ್ ಗೊಡಗಿಂಡಿ, ಮೈಸೂರು ಮಂಜುನಾಥ್ ಸಹೋದರ ರಿಂದ ವಿವಿಧ ಕಾರ್ಯಕಮಗಳು ನಡೆಯಲಿವೆ. ಈ ವೇಳೆ ಧ್ವನಿ ಮತ್ತು ಬೆಳಕು ಕಾರ್ಯಕ್ರಮ ತಾತ್ಕಾಲಿಕ ರದ್ದಾಗಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ