ಮುಸ್ಲಿಂ ವಿದ್ಯಾರ್ಥಿನಿಯರು ಶಾಲೆ-ಕಾಲೇಜಿಗೆ ಬಾರದಿರುವುದು ಕಳವಳಕಾರಿ: ಶಿಕ್ಷಣ ಸಚಿವ ಬಿ.ಸಿ. ನಾಗೇಶ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ಹಿಜಾಬ್ ವಿವಾದ ಹಿನ್ನೆಲೆಯಲ್ಲಿ ಕೆಲವು ಮುಸ್ಲಿಂ ವಿದ್ಯಾರ್ಥಿನಿಯರು ಶಾಲಾ-ಕಾಲೇಜುಗಳಿಗೆ ಹಾಜರಾಗುತ್ತಿಲ್ಲ. ಇದು ಕಳವಳಕಾರಿ ವಿಚಾರವಾಗಿದೆ ಎಂದು ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಹೇಳಿದ್ದಾರೆ.

ಹಿಜಾಬ್ ವಿವಾದಕ್ಕೆ ಸಂಬಂಧಿಸಿದ ಅರ್ಜಿಗಳ ವಿಚಾರಣೆಯಲ್ಲಿ ರಾಜ್ಯ ಹೈಕೋರ್ಟ್ ನಡೆಸುತ್ತಿರುವ ನಡುವಲ್ಲೇ ಹಿಜಾಬ್ ವಿವಾದ ವೇಗವಾಗಿ ಹರಡುತ್ತಿದೆ. ವಿದ್ಯಾರ್ಥಿನಿಯರು ಶಿಕ್ಷಣ ತೊರೆಯುತ್ತಿರುವುದು ಕಳವಳಕಾರಿ ವಿಷಯ. ಒಂದು ಕಾಲೇಜಿನಿಂದ ಆರಂಭವಾದ ವಿವಾದ ಇದೀಗ ಎಲ್ಲೆಡೆ ಹಬ್ಬಿದೆ. ದೇಶ, ವಿದೇಶಗಳಲ್ಲಿಯೂ ಈ ಬಗ್ಗೆ ಚರ್ಚೆಯಾಗುತ್ತಿದೆ. ಈ ವಿವಾದ ದೊಡ್ಡ ತಲೆನೋವಾಗಿದೆ ಎಂದಿದ್ದಾರೆ.
ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ಬರುವಂತಿಲ್ಲ ಎನ್ನುವ ಹೈಕೋರ್ಟ್ ಆದೇಶ ಸ್ಪಷ್ಟವಾಗಿದೆ. ಡ್ರೆಸ್ ಕೋಡ್ ನಿಗದಿ ಮಾಡಿಲ್ಲ. ಆದರೆ ಕೆಲವು ಕಾಳೇಜುಗಳಲ್ಲಿ ಡ್ರೆಸ್ ಕೋಡ್ ನಿಗದಿ ಮಾಡಲಾಗಿದೆ, ಅದನ್ನು ಪಾಲಿಸುವಂತೆ ಮಾತ್ರ ಹೇಳಲಾಗಿದೆ ಎಂದಿದ್ದಾರೆ.

ವಿದ್ಯಾರ್ಥಿನಿಯರು ಈ ಎಲ್ಲ ವಿಷಯಗಳನ್ನು ಪಕ್ಕಕ್ಕಿಟ್ಟು ತಮ್ಮ ಶಿಕ್ಷಣದ ಬಗ್ಗೆ ಗಮನ ಹರಿಸಬೇಕು ಎಂದು ಮನವಿ ಮಾಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!