ಹೊಸದಿಗಂತ ಡಿಜಿಟಲ್ ಡೆಸ್ಕ್:
ನನ್ನ ಕುಟುಂಬದ ಹತ್ತು ಸದಸ್ಯರಿಗೆ ಒಟ್ಟಿಗೆ ಅಲ್ಲಾನ ಆಶೀರ್ವಾದ ಸಿಕ್ಕಿದೆ. ಅವರೆಲ್ಲರೂ ಅಲ್ಲಾನ ಅತಿಥಿಗಳಾಗಿದ್ದಾರೆ ಎಂದು ಉಗ್ರ ಸಂಘಟನೆ ಜೈಶ್-ಎ-ಮೊಹಮ್ಮದ್ ಮುಖ್ಯಸ್ಥ ಮೌಲಾನಾ ಮಸೂದ್ ಅಜರ್ ಹೇಳಿಕೊಂಡಿದ್ದಾನೆ.
ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪ್ರತೀಕಾರವಾಗಿ ಭಾರತ ನಡೆಸಿದ ಆಪರೇಷನ್ ಸಿಂಧೂರದಲ್ಲಿ ಮಸೂದ್ ಕುಟುಂಬದ 10 ಸದಸ್ಯರು ಮತ್ತು ಅವನ ನಾಲ್ವರು ಸಹಾಯಕರು ಹತ್ಯೆಯಾಗಿದ್ದರು. ಈ ಬಗ್ಗೆ ಪ್ರತಿಕ್ರಿಯಿಸಿ, ನನ್ನ ಕುಟುಂಬದ ಹತ್ತು ಸದಸ್ಯರು ಅಲ್ಲಾನ ಅತಿಥಿಗಳಾಗಿದ್ದಾರೆ, ನನಗೆ ಪದಗಳಲ್ಲಿ ಹೇಳಲಾಗದಷ್ಟು ದುಃಖವಾಗಿದೆ. ಆದರೆ ಈ ಬಗ್ಗೆ ನನಗೆ ವಿಷಾದವಿಲ್ಲ, ಭಯವೂ ಇಲ್ಲ. ಇಂದು ಹುತಾತ್ಮರಾಗುತ್ತಿರುವ ಅಲ್ಲಾಹನ ಈ 14 ಅತಿಥಿಗಳಲ್ಲಿ ನಾನೂ ಸೇರಬೇಕೆಂದು ಪ್ರಾರ್ಥಿಸುತ್ತೇನೆʼ ಎಂದು ಹೇಳಿದ್ದಾನೆ.