ಹೊಸದಿಗಂತ ಡಿಜಿಟಲ್ ಡೆಸ್ಕ್:
ರೇವಣ್ಣ ವಿಚಾರದಲ್ಲಿ ಮಾತ್ರ ನನ್ನ ಹೋರಾಟ. ಪ್ರಜ್ವಲ್ ವಿರುದ್ಧ ಅಲ್ಲ ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.
ಹಲಗೆವಡೇರಹಳ್ಳಿ ಡಿನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಎಚ್ ಡಿಕೆ ಹಾಜರಾಗಿದ್ದರು. ಆ ವೇಳೆ ರೇವಣ್ಣ ಮತ್ತು ಪ್ರಜ್ವಲ್ ರೇವಣ್ಣ ಪ್ರಕರಣದ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿ, ಎಸ್ಐಟಿ ರಚನೆ ಮಾಡಲಾಗಿದೆ. ಗೃಹ ಸಚಿವರನ್ನು ಕೇಳಿ. ರೇವಣ್ಣ, ಪ್ರಜ್ವಲ್ ನನ್ನು ಯಾಕೆ ತನಿಖೆ ಮಾಡುತ್ತಿದ್ದೀರಿ? ನೀವು ವೀಡಿಯೊಗಳನ್ನು ಪೋಸ್ಟ್ ಮಾಡಿದ ಜನರನ್ನು ಏಕೆ ಸಂಶೋಧಿಸಬಾರದು?
ಮಹಿಳಾ ಸಮಿತಿಯೂ ಪತ್ರ ಬರೆದಿದೆ. ವೀಡಿಯೋ ಲೀಕ್ ಮಾಡಿದವರನ್ನ ಯಾಕೆ ತನಿಖೆ ನಡೆಸುತ್ತಿಲ್ಲ. ಆದರೆ ಇಲ್ಲಿಯವರೆಗೆ ಏನೂ ಮಾಡಿಲ್ಲ. ಪರಮೇಶ್ವರ ಅವರು ಏನು ಮಾಡುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.