ವಂಚನೆಗೆ ನನ್ನ ಒಳ್ಳೆಯತನ ಸಾಧನ ಅಲ್ಲ: ಕಿಚ್ಚ ಸುದೀಪ್ ಯಾಕೆ ಹೀಗೆ ಹೇಳಿದ್ರು?

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ನಟ ಸುದೀಪ್ ಅವರ ಮೇಲೆ ನಿರ್ಮಾಪಕರು ನನಗೆ ಸಿನಿಮಾ ಮಾಡಿಕೊಡ್ತೀನಿ ಅಂತ 8 ವರ್ಷದಿಂದ ಹೇಳಿಕೊಂಡು ಬರುತ್ತಿದ್ದಾರೆ ಎಂದು ಆರೋಪ ಮಾಡಿದ್ದೂ, ಇದಕ್ಕೆ ಟ್ವೀಟ್ ಮೂಲಕ ಕಿಚ್ಚ ಪರೋಕ್ಷವಾಗಿ ಪ್ರತಿಕ್ರಿಯೆ ನೀಡಿದ್ದಾರೆ.

ಈ ಸಾಲನ್ನು ಓದಿ. ಇದು ತುಂಬ ಚೆನ್ನಾಗಿದೆ’ ಎಂಬ ಕ್ಯಾಪ್ಷನ್​ ಜೊತೆಯಲ್ಲಿ ಸುದೀಪ್​ ಅವರು ಟ್ವೀಟ್​ ಮಾಡಿದ್ದಾರೆ. ‘ಇದು ತಿಳಿದಿರಲಿ: ದುರುಪಯೋಗಕ್ಕೆ ಅಥವಾ ವಂಚನೆಗೆ ನನ್ನ ಒಳ್ಳೆಯತನ ಒಂದು ಸಾಧನ ಅಲ್ಲ. ಸತ್ಯವಾಗಿದ್ದಾಗ ಅದು ಪ್ರಜ್ವಲಿಸುತ್ತದೆ. ದುರಹಂಕಾರದಿಂದ ಅದರ ಕಾಂತಿ ಕಳೆಗುಂದಲು ನಾನು ಬಿಡುವುದಿಲ್ಲ. ವಿನಯದಿಂದಿರಿ, ಸತ್ಯವಂತರಾಗಿರಿ’ ಎಂಬ ಸಾಲನ್ನು ಸುದೀಪ್​ ಅವರು ಟ್ವಿಟರ್​ನಲ್ಲಿ ಹಂಚಿಕೊಂಡಿದ್ದಾರೆ.

‘ರಾಜಿಯಾಗದ ಒಳ್ಳೆಯತನ’ ಎಂದು ಸುದೀಪ್​ ಅವರು ಹ್ಯಾಶ್​ ಟ್ಯಾಗ್​ ಬಳಸಿದ್ದಾರೆ. ಅದರ ಜೊತೆ #k46 ಹ್ಯಾಶ್​ ಟ್ಯಾಗ್​ ಕೂಡ ಇದೆ. ಹಾಗಾಗಿ ಇದು ಸಿನಿಮಾಗೆ ಸಂಬಂಧಿಸಿದಂತೆ ಹೇಳಿದ್ದೋ ಅಥವಾ ಯಾವುದಾದರೂ ವ್ಯಕ್ತಿಗೆ ಸಂಬಂಧಿಸಿ ಹೇಳಿದ್ದೋ ಎಂಬ ಪ್ರಶ್ನೆ ಅಭಿಮಾನಿಗಳಲ್ಲಿ ಮೂಡಿದೆ. ತಮ್ಮ 46ನೇ ಸಿನಿಮಾದ ಟೀಸರ್​ ಬಿಡುಗಡೆಯಾದ ಬೆನ್ನಲ್ಲೇ ಅವರು ಈ ರೀತಿ ಟ್ವೀಟ್​ ಮಾಡಿರುವುದು ಅಚ್ಚರಿ ಮೂಡಿಸಿದೆ.

https://twitter.com/KicchaSudeep/status/1676111330527559680?ref_src=twsrc%5Etfw%7Ctwcamp%5Etweetembed%7Ctwterm%5E1676111330527559680%7Ctwgr%5E92c0f2593c738cc24fc0f8ac4f738e97ee54df26%7Ctwcon%5Es1_&ref_url=https%3A%2F%2Fm.dailyhunt.in%2Fnews%2Findia%2Fkannada%2Findia%3Fmode%3Dpwaaction%3Dclick

ನಿರ್ಮಾಪಕ ಎನ್​. ಕುಮಾರ್ ಅವರು ಸುದೀಪ್​ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸುದೀಪ್​ ಅವರು ಅಡ್ವಾನ್ಸ್​ ಪಡೆದುಕೊಂಡು ಅನೇಕ ವರ್ಷಗಳು ಕಳೆದಿದ್ದರೂ ಕಾಲ್​ಶೀಟ್​ ನೀಡುತ್ತಿಲ್ಲ ಎಂದು ಅವರು ದೂರು ನೀಡಿದ್ದಾರೆ. ಇದಕ್ಕೆ ಸುದೀಪ್​ ಅವರು ಇನ್ನೂ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಆದರೆ ಟ್ವಿಟರ್​ನಲ್ಲಿ ಅವರು ಈ ರೀತಿ ಪೋಸ್ಟ್​ ಮಾಡಿರುವುದು ಅಚ್ಚರಿ ಮೂಡಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!