ನನ್ನ ಆರೋಗ್ಯ ಉತ್ತಮವಾಗಿದೆ, ಶೀಘ್ರದಲ್ಲಿ ಎಲ್ಲ ಕಾರ್ಯಕ್ರಮಗಳಲ್ಲಿ ಸಕ್ರಿಯವಾಗಿ ಭಾಗಿಯಾಗಲಿದ್ದೆನೆ: ಹೆಚ್.ಡಿ ದೇವೇಗೌಡ

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ನನ್ನ ಆರೋಗ್ಯ ಉತ್ತಮವಾಗಿದ್ದು, ಪಕ್ಷದ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದೇನೆ ಎಂದು ಮಾಜಿ ಪ್ರಧಾನಮಂತ್ರಿಗಳಾದ ಹೆಚ್.ಡಿ.ದೇವೇಗೌಡ ಅವರು ತಿಳಿಸಿದ್ದಾರೆ.

ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು, ‘ ಸ್ವಲ್ಪ ಪ್ರಮಾಣದಲ್ಲಿ ಅನಾರೋಗ್ಯ ಉಂಟಾದ ಕಾರಣಕ್ಕೆ ವೈದ್ಯರು ವಿಶ್ರಾಂತಿಗೆ ಸಲಹೆ ಮಾಡಿದ್ದರು.ಆದಕಾರಣ ಕೆಲ ಕಾಲ ಮನೆಯಲ್ಲೇ ವಿಶ್ರಾಂತಿ ಪಡೆಯಬೇಕಾಯಿತು. ಇನ್ನು ಕೆಲ ದಿನ ಮನೆಯಲ್ಲೇ ಇದ್ದು ವಿಶ್ರಾಂತಿ ಪಡೆಯುವಂತೆ ವೈದ್ಯರು ಸಲಹೆ ಮಾಡಿದ್ದಾರೆ ಎಂದು ಅವರು ಹೇಳಿದ್ದಾರೆ.

ಮನೆಯಿಂದಲೇ ನನ್ನೆಲ್ಲಾ ರಾಜಕೀಯ, ಸಂಸದೀಯ ಹಾಗೂ ಪಕ್ಷದ ಜವಾಬ್ದಾರಿಗಳನ್ನು ನಿರ್ವಹಣೆ ಮಾಡಲಿದ್ದೇನೆ. ಹೀಗಾಗಿ ಪಕ್ಷದ ಕಾರ್ಯಕರ್ತರು ಹಾಗೂ ಮುಖಂಡರು ಕೆಲವು ದಿನಗಳ ಮಟ್ಟಿಗೆ ನನ್ನ ಭೇಟಿಗೆ ಬರುವುದು ಬೇಡ ಎಂದು ಮಾಜಿ ಪ್ರಧಾನಮಂತ್ರಿಗಳು ಮನವಿ ಮಾಡಿದ್ದಾರೆ.

ಇನ್ನು ಕೆಲ ದಿನಗಳ ನಂತರ ನಾನೇ ಖುದ್ದು ಪಕ್ಷದ ಕಚೇರಿಗೆ ಭೇಟಿ ನೀಡುವುದರ ಜತೆಗೆ, ಎಲ್ಲ ಕಾರ್ಯಕ್ರಮಗಳಲ್ಲಿ ಸಕ್ರಿಯವಾಗಿ ಭಾಗಿಯಾಗಲಿದ್ದೆನೆ. ಯಾವುದೇ ಕಾರಣಕ್ಕೂ ಮುಖಂಡರು, ಕಾರ್ಯಕರ್ತರು ಅನ್ಯತಾ ಭಾವಿಸಬಾರದು ಎಂದು ಕೋರುತ್ತೇನೆ ಎಂದು ಮಾಜಿ ಪ್ರಧಾನಮಂತ್ರಿಗಳು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಅಲ್ಲದೆ, ನನ್ನ ನಿವಾಸಕ್ಕೆ ಭೇಟಿ ನೀಡಿ ನನ್ನ ಆರೋಗ್ಯ ವಿಚಾರಿಸಿದ ಪ್ರತಿಪಕ್ಷ ನಾಯಕರಾದ ಶ್ರೀ ಸಿದ್ದರಾಮಯ್ಯ, ಮುಖ್ಯಮಂತ್ರಿಗಳಾದ ಶ್ರೀ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿಗಳಾದ ಶ್ರೀ ಯಡಿಯೂರಪ್ಪ, ಕಂದಾಯ ಸಚಿವ ಶ್ರೀ ಅಶೋಕ್ ಸೇರಿದಂತೆ ಇತರೆ ಎಲ್ಲಾ ಸಚಿವರು, ಮುಖಂಡರಿಗೆ ನಾನು ಆಭಾರಿಯಾಗಿದ್ದೇನೆ ಎಂದು ಅವರು ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!