ನನ್ನ ಹೃದಯ ಒಡೆದು ಹೋಗಿದೆ…ನನ್ನನ್ನು ಒಬ್ಬ ದುಃಖಿತ ತಂದೆ ಎಂದು ಗುರುತಿಸಿ: ಎಡಿಜಿಪಿ ಕೆ.ರಾಮಚಂದ್ರ ರಾವ್

ಹೊಸ ದಿಗಂತ ಡಿಜಿಟಲ್ ಡೆಸ್ಕ್: 

ಪೋಷಕನಾಗಿ ನನ್ನ ಹೃದಯ ಒಡೆದು ಹೋಗಿದೆ, ನನ್ನ ಜೀವನದಲ್ಲಿ ಊಹೆಗೂ ನಿಲುಕದ ಘಟನೆಯಾಗುತ್ತೆ ಅಂದುಕೊಂಡಿರಲಿಲ್ಲ. ದಯವಿಟ್ಟು ನನ್ನನ್ನು ದುಃಖಿತ ತಂದೆ ಎಂದು ಗುರುತಿಸಿ ಎಂದು ರನ್ಯಾ ಮಲತಂದೆ ಎಡಿಜಿಪಿ ಕೆ.ರಾಮಚಂದ್ರ ರಾವ್ ಬೇಸರ ವ್ಯಕ್ತಪಡಿಸಿದ್ದಾರೆ.

ರನ್ಯಾ ರಾವ್ ಚಿನ್ನದ ಕಳ್ಳಸಾಗಾಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಧ್ಯಮ ಪ್ರಕಟಣೆ ಮೂಲಕ ತಿಳಿಸಿರುವ ಅವರು, ಇತ್ತೀಚಿನ ಬೆಳವಣಿಗೆಯಿಂದ ನನ್ನ ಮನಸಿಗೆ ತುಂಬಾ ನೋವಾಗಿದೆ. ಈ ಪ್ರಕರಣದಿಂದಾಗಿ ನನಗೆ ಹಾಗೂ ನನ್ನ ಕುಟುಂಬಕ್ಕೆ ತುಂಬಾ ಕಷ್ಟದ ಸಮಯ. ಈ ಸಂದರ್ಭ ಎದುರಿಸಲು ನಾವು ಕಷ್ಟಪಡುತ್ತಿದ್ದೇವೆ ಎಂದು ಅಸಮಾಧಾನ ಹೊರಹಾಕಿದರು.

2024ರಲ್ಲಿ ರನ್ಯಾ ಹಾಗೂ ಜತಿನ್ ಹುಕ್ಕೇರಿ ಮದುವೆಯಾದರು. ಆ ಬಳಿಕ ತಮ್ಮ ಖಾಸಗಿತನ ಹಾಗೂ ಸ್ವಾತಂತ್ರ‍್ಯವನ್ನು ಕಾಪಾಡಿಕೊಂಡಿದ್ದಾರೆ. ಮದುವೆಯಾದ ಬಳಿಕ ಅವಳು ನಮ್ಮ ಮನೆಗೆ ಬರುವುದನ್ನು ನಿಲ್ಲಿಸಿದ್ದಳು. ಜೊತೆಗೆ ಭೇಟಿಯಾಗಲು ಅವಕಾಶವೂ ನೀಡುತ್ತಿರಲಿಲ್ಲ. ಇದರಿಂದ ನಮ್ಮ ಹಾಗೂ ಅವರ ನಡುವೆ ಅಂತರ ಬೆಳೆದಿತ್ತು. ನಾನು ಕೆಲಸದಲ್ಲಿ ಪ್ರಾಮಾಣಿಕನಾಗಿದ್ದೇನೆ, ನನ್ನದೇ ಆದ ಶಿಸ್ತಿನ ಜೀವನ ನಡೆಸಿದ್ದೇನೆ. ಈ ಕೇಸ್‌ನಿಂದಾಗಿ ನಮ್ಮ ಕುಟುಂಬಕ್ಕೆ ಕಳಂಕ ಬಂದಿದೆ. ನನ್ನನ್ನು ಒಬ್ಬ ದುಃಖಿತ ತಂದೆ ಎಂದು ಗುರುತಿಸಿ ಎಂದು ಕೇಳಿಕೊಳ್ಳುತ್ತೇನೆ. ನನ್ನ ಜೀವನದಲ್ಲಿ ಊಹೆಗೂ ನಿಲುಕದ ಘಟನೆ ನಡೆಯುತ್ತದೆ ಎಂದು ಅಂದುಕೊಂಡಿರಲಿಲ್ಲ. ರನ್ಯಾ ವಿಚಾರದಲ್ಲಿ ನಾನು ಕಾನೂನು ಉಲ್ಲಂಘಿಸಿದರೆ ಕ್ರಮ ಕೈಗೊಳ್ಳಲಿ ಎಂದು ಉಲ್ಲೇಖಿಸಿದ್ದಾರೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!