ಹೊಸದಿಗಂತ ಡಿಜಿಟಲ್ ಡೆಸ್ಕ್:
ಐಪಿಎಲ್ನ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಭರ್ಜರಿ ಜಯ ಸಾಧಿಸಿದೆ. ಈ ಗೆಲುವಿನ ರೂವಾರಿಗಳಲ್ಲಿ ಸುಯಶ್ ಶರ್ಮಾ ಕೂಡ ಒಬ್ಬರು. ಏಕೆಂದರೆ ಈ ಪಂದ್ಯದಲ್ಲಿ ಸುಯಶ್ 3 ಓವರ್ಗಳಲ್ಲಿ 17 ರನ್ ನೀಡಿ 3 ವಿಕೆಟ್ ಕಬಳಿಸಿದ್ದರು.
ವಿಶೇಷ ಎಂದರೆ ಈ ಬಾರಿಯ ಐಪಿಎಲ್ಗೆ ಆಯ್ಕೆಯಾಗಿದ್ದ ಸುಯಶ್ ಶರ್ಮಾ ಟೂರ್ನಿಗೆ ಅಲಭ್ಯರಾಗುವ ಸ್ಥಿತಿಯಲ್ಲಿದ್ದರು. ಐಪಿಎಲ್ ಆರಂಭಕ್ಕೂ ಕೆಲ ತಿಂಗಳುಗಳ ಮುಂಚೆ ಸುಯಶ್ ಹರ್ನಿಯಾ ಸಮಸ್ಯೆಯಿಂದ ಬಳಲುತ್ತಿದ್ದರು. ಹೀಗಾಗಿ ಅವರು ಈ ಬಾರಿಯ ಐಪಿಎಲ್ನಿಂದ ಹೊರಗುಳಿಯಲು ನಿರ್ಧರಿಸಿದ್ದರು. ಈ ವಿಷಯ ತಿಳಿಯುತ್ತಿದ್ದಂತೆ ಆರ್ಸಿಬಿ ಫ್ರಾಂಚೈಸಿ ಶರ್ಮಾ ಅವರ ನೆರವಿಗೆ ನಿಂತು. ಉತ್ತಮ ಚಿಕಿತ್ಸೆಗಾಗಿ ಅವರನ್ನು ಲಂಡನ್ಗೆ ಕಳುಹಿಸಿ ಇದರ ಖರ್ಚು ವೆಚ್ಚಗಳನ್ನು ಆರ್ಸಿಬಿ ಫ್ರಾಂಚೈಸಿಯೇ ನೋಡಿಕೊಂಡಿತು.
ಇದೀಗ ಅದೇ ಆರ್ಸಿಬಿ ಫ್ರಾಂಚೈಸಿಗೆ ಸುಯಶ್ ಶರ್ಮಾ ಕಪ್ ಗೆಲ್ಲಿಸಿಕೊಡಲು ಪಣತೊಟ್ಟಿದ್ದಾರೆ. ಅನಾರೋಗ್ಯದಲ್ಲಿ ಕೈ ಹಿಡಿದ RCBಗೆ ಕಪ್ ಗೆಲ್ಲಿಸಿಕೊಡುವುದೇ ನನ್ನ ಗುರಿ ಎಂದು ಬಹಿರಂಗವಾಗಿಯೇ ಹೇಳಿದ್ದಾರೆ. ಇನ್ನು ಜೂನ್ 3 ರಂದು ಕೂಡ ಇಂತಹದ್ದೇ ಪ್ರದರ್ಶನ ಮೂಡಿಬಂದರೆ, ಆರ್ಸಿಬಿ ಕಪ್ ಗೆಲ್ಲುವುದರಲ್ಲಿ ಯಾವುದೇ ಡೌಟೇ ಇಲ್ಲ.