ಹೊಸದಿಗಂತ ಡಿಜಿಟಲ್ ಡೆಸ್ಕ್:
ಲೋಕಸಭೆ ಚುನಾವಣೆಯಲ್ಲಿ ತಮ್ಮ ಗೆಲುವು ಖಚಿತ ಎಂದು ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸ್ವತಂತ್ರ ಅಭ್ಯರ್ಥಿ ಈಶ್ವರಪ್ಪ ವಿಶ್ವಾಸ ವ್ಯಕ್ತಪಡಿಸಿದರು.
ಕೆ.ಎಸ್.ಈಶ್ವರಪ್ಪ ಶಿವಮೊಗ್ಗ ಜಿಲ್ಲಾಧಿಕಾರಿ ಆಯೋಗಕ್ಕೆ ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನ್ನ ಗೆಲುವು ನಿಶ್ಚಿತ, ಬಿಜೆಪಿಯಲ್ಲಿ ರಾಜಕೀಯ ಶುದ್ಧಿಯಾಗಬೇಕು. ಅಪ್ಪ-ಮಕ್ಕಳ ಕೈಯಲ್ಲಿ ಬಿಜೆಪಿ ಸಿಲುಕಿಕೊಂಡಿದೆ ಎಂದರು.
ಈ ಬಾರಿ ಬಿ.ವೈ. ರಾಘವೇಂದ್ರ ಸೋಲು ಖಚಿತವಾಗಿದ್ದು, ಬಿ.ವೈ. ವಿಜಯೇಂದ್ರ ಚುನಾವಣೆ ನಂತರ ನಿವೃತ್ತಿಯಾಗಲಿದ್ದಾರೆ. ನಾವು ಉತ್ತಮ ಬಿಜೆಪಿಯನ್ನು ಮರುನಿರ್ಮಾಣ ಮಾಡುತ್ತೇವೆ ಎಂದು ಈಶ್ವರಪ್ಪ ಹೇಳಿದರು.