ಹೊಸದಿಗಂತ ಡಿಜಿಟಲ್ ಡೆಸ್ಕ್:
ಮೈಸೂರಿನ ಗುಂಬಜ್ ಮಾದರಿಯ ಬಸ್ ನಿಲ್ದಾಣದ ವಿನ್ಯಾಸದ ಬಗ್ಗೆ ಸಾಕಷ್ಟು ಚರ್ಚೆ ನಡೆಯುತ್ತಿದ್ದು, ಈ ಬಗ್ಗೆ ಸಿಎಂ ಬೊಮ್ಮಾಯಿ ಮಾತನಾಡಿದ್ದಾರೆ.
ಬಸ್ ನಿಲ್ದಾಣದ ವಿನ್ಯಾಸದ ಬಗ್ಗೆ ತಜ್ಞರ ಸಮಿತಿ ರಚಿಸಲಾಗುವುದು. ಇದೇ ವಿಚಾರಕ್ಕೆ ಶಾಸಕ ರಾಮದಾಸ್ ಹಾಗೂ ಸಂಸದ ಪ್ರತಾಪ್ ಸಿಂಹ ನಡುವೆ ಮಾತುಕತೆಯಾಗಿದೆ.
ಆದರೆ ಇವರ ನಡುವಿನ ಭಿನ್ನಾಭಿಪ್ರಾಯ ಏಕೆ ಎಂದು ಮಾತನಾಡುವ ಮುನ್ನ ನಿಲ್ದಾಣದ ವಿನ್ಯಾಸದ ಬಗ್ಗೆ ಪರಿಶೀಲನೆ ಆಗಬೇಕಿದೆ. ಹಾಗಾಗಿ ತಜ್ಞರ ತಂಡ ಮೈಸೂರಿಗೆ ಬಂದು ಪರಿಶೀಲಿಸಲಿದೆ. ವರದಿ ನಂತರ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.