ಹೊಸದಿಗಂತ ಡಿಜಿಟಲ್ ಡೆಸ್ಕ್:
ನಗರದ ವಿದ್ಯಾರಣ್ಯಪುರಂನಲ್ಲಿ 96ನೇ ವರ್ಷದ ಐತಿಹಾಸಿಕ ಕರಗ ಮಹೋತ್ಸವ ಸಾವಿರಾರು ಭಕ್ತರ ಸಮ್ಮುಖದಲ್ಲಿ ಸಂಭ್ರಮ, ಭಕ್ತಿ ಮತ್ತು ಸಾಂಸ್ಕೃತಿಕ ವೈಭವದೊಂದಿಗೆ ಅದ್ಧೂರಿಯಾಗಿ ನೆರವೇರಿತು.
ಶ್ರೀ ಚಾಮುಂಡೇಶ್ವರಿ ದೇವಿ ಹಾಗೂ ಶ್ರೀ ಕರುಮಾರಿಯಮ್ಮ ದೇವಿಯ ಕರಗಗಳನ್ನು ನಗರದ ಪ್ರಮುಖ ಬೀದಿಗಳಲ್ಲಿ ಭವ್ಯವಾಗಿ ಮೆರವಣಿಗೆ ಮಾಡಲಾಯಿತು. ಭಕ್ತರು ಹೂವಿನ ಮಳೆಗರೆದು, ಆರತಿ ಬೆಳಗಿ ದೇವಿಯರ ಆಶೀರ್ವಾದ ಪಡೆದರು. ಮನೆಗಳ ಮುಂದೆ ರಂಗೋಲಿ ಹಾಕಿ ಹಬ್ಬದ ಸಂಭ್ರಮವನ್ನು ಮತ್ತಷ್ಟು ಹೆಚ್ಚಿಸಿದರು.
ಇದನ್ನೂ ಓದಿ:
ಡೊಳ್ಳು ಕುಣಿತ, ನಾದಸ್ವರ, ತಮಟೆ ವಾದನ ಹಾಗೂ ಜನಪದ ನೃತ್ಯಗಳು ಉತ್ಸವದ ಪ್ರಮುಖ ಆಕರ್ಷಣೆಯಾಗಿದ್ದವು. ಕಲಾವಿದರ ಪ್ರದರ್ಶನಕ್ಕೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದರು. ವಿದ್ಯುತ್ ದೀಪಾಲಂಕಾರದಿಂದ ದೇವಾಲಯ ಹಾಗೂ ಸುತ್ತಮುತ್ತಲಿನ ಪ್ರದೇಶಗಳು ಕಂಗೊಳಿಸಿದವು.
ಉತ್ಸವವು ಶಾಂತಿಯುತವಾಗಿ ನಡೆಯಲು ಪೊಲೀಸ್ ಇಲಾಖೆ ಬಿಗಿ ಭದ್ರತಾ ವ್ಯವಸ್ಥೆ ಕಲ್ಪಿಸಿತ್ತು.



