Tuesday, January 13, 2026
Tuesday, January 13, 2026
spot_img

ಮೈಸೂರು ಸಿಲಿಂಡರ್ ಸ್ಫೋಟ ಪ್ರಕರಣ: ಹೈ ಅಲರ್ಟ್ ಘೋಷಿಸಿದ ಗೃಹ ಸಚಿವ ಪರಮೇಶ್ವರ್!

ಮೈಸೂರು ಅರಮನೆಯ ದ್ವಾರದ ಬಳಿ ನಡೆದ ಹೀಲಿಯಂ ಸಿಲಿಂಡರ್ ಸ್ಫೋಟ ಪ್ರಕರಣವನ್ನು ರಾಜ್ಯ ಸರ್ಕಾರ ಅತ್ಯಂತ ಗಂಭೀರವಾಗಿ ಪರಿಗಣಿಸಿದೆ. ಬೆಂಗಳೂರಿನಲ್ಲಿ ಮಾತನಾಡಿದ ಗೃಹ ಸಚಿವ ಡಾ. ಜಿ. ಪರಮೇಶ್ವರ್, “ಈ ಘಟನೆಯನ್ನು ಸೂಕ್ಷ್ಮವಾಗಿ ತನಿಖೆ ನಡೆಸಲು ಅಧಿಕಾರಿಗಳಿಗೆ ಸೂಚಿಸಲಾಗಿದೆ. ಮೈಸೂರು ಪ್ರಮುಖ ಪ್ರವಾಸಿ ತಾಣವಾಗಿರುವುದರಿಂದ ಪ್ರವಾಸಿಗರ ಸುರಕ್ಷತೆಯ ದೃಷ್ಟಿಯಿಂದ ಹೆಚ್ಚಿನ ಮುನ್ನೆಚ್ಚರಿಕೆ ವಹಿಸಲಾಗುವುದು,” ಎಂದು ತಿಳಿಸಿದರು.

ಲಕ್ನೋ ಮೂಲದ ಬಲೂನ್ ವ್ಯಾಪಾರಿ ಈ ಘಟನೆಯಲ್ಲಿ ಮೃತಪಟ್ಟಿದ್ದು, ಬೀದಿ ಬದಿ ವ್ಯಾಪಾರಿಗಳ ಮೇಲೆ ನಿಯಂತ್ರಣದ ಅಗತ್ಯವಿದೆ ಎಂಬುದು ಈ ಘಟನೆಯಿಂದ ಸ್ಪಷ್ಟವಾಗಿದೆ. “ಸಾಮಾನ್ಯ ಬಲೂನ್ ವ್ಯಾಪಾರಿಗೆ ಹೀಲಿಯಂ ಸಿಲಿಂಡರ್ ಎಲ್ಲಿಂದ ಸಿಕ್ಕಿತು? ಇದರ ಹಿಂದೆ ಬೇರೆನಾದರೂ ಉದ್ದೇಶವಿದೆಯೇ?” ಎಂಬ ಬಗ್ಗೆ ಸಮಗ್ರ ವರದಿ ನೀಡುವಂತೆ ಅವರು ಅಧಿಕಾರಿಗಳಿಗೆ ಆದೇಶಿಸಿದ್ದಾರೆ.

ಹೊಸ ವರ್ಷಾಚರಣೆಯ ಹಿನ್ನೆಲೆಯಲ್ಲಿ ಡಿಸೆಂಬರ್ 28 ರಂದು ಎಲ್ಲಾ ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ಪರಮೇಶ್ವರ್ ಸಭೆ ನಡೆಸಲಿದ್ದಾರೆ. ಈಗಾಗಲೇ ರಾಜ್ಯಾದ್ಯಂತ ಭದ್ರತಾ ಸರ್ವೆ ಕಾರ್ಯ ನಡೆಯುತ್ತಿದ್ದು, ಸಭೆಯ ನಂತರ ಅಂತಿಮ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಅವರು ಹೇಳಿದರು.

Most Read

error: Content is protected !!