ಹೊಸದಿಗಂತ ವರದಿ, ಮೈಸೂರು
ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಅರಮನೆ ನಗರಿ ಮೈಸೂರಿಗೆ ಎರಡು ದಿನಗಳ ಭೇಟಿ ನೀಡಿ, ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಕೈಗೊಳ್ಳಲಾದ ಭದ್ರತಾ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ, ಗೃಹ ಸಚಿವ ಆರಗ ಜ್ಞಾನೇಂದ್ರ ರವರು ಭಾನುವಾರ ಮುಂಜಾನೆ ಮೈಸೂರು ನಗರದಲ್ಲಿ ಕೈಗೊಂಡಿರುವ ಭದ್ರತಾ ವ್ಯವಸ್ಥೆಯನ್ನು ಪರಿಶೀಲಿಸಿದರು. ಪ್ರಧಾನ ಮಂತ್ರಿ ಯವರು ಭಾಗವಹಿಸುವ, ಐತಿಹಾಸಿಕ ಮೈಸೂರು ಅರಮನೆಯ ಮುಂಭಾಗದಲ್ಲಿ ಆಯೋಜಿಸಿರುವ ಯೋಗ ಕಾರ್ಯಕ್ರಮದ ಸ್ಥಳ ಪರಿವೀಕ್ಷಣಾ ನಡೆಸಿದರು
ಈ ವೇಳೆ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್ ಟಿ ಸೋಮಶೇಖರ್, ಸಂಸದ ಪ್ರತಾಪ್ ಸಿಂಹ, ಶಾಸಕ ಎಲ್. ನಾಗೇಂದ್ರ ಹಾಗೂ ಇತರ ಗಣ್ಯರು ಉಪಸ್ಥಿತರಿದ್ದರು.
ಮೈಸೂರು ನಗರ ಪೊಲೀಸ್ ಆಯುಕ್ತ ಚಂದ್ರಗುಪ್ತ, ಮೈಸೂರು ಜಿಲ್ಲೆ ಪೊಲೀಸ್ ಮುಖ್ಯಸ್ಥ ಚೇತನ್ ಅವರೂ ಉಪಸ್ಥಿತರಿದ್ದರು.
ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ