ಹೊಸದಿಗಂತ ವರದಿ, ಮೈಸೂರು
ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಏಪ್ರಿಲ್ 1 ಶುಕ್ರವಾರ ಬೆಳಿಗ್ಗೆ 11 ಗಂಟೆಗೆ 2022ರ ಬೋರ್ಡ್ ಪರೀಕ್ಷೆಯಲ್ಲಿ ಭಾಗವಹಿಸುವ 10 ಮತ್ತು 12ನೇ ತರಗತಿಯ ಮಕ್ಕಳನ್ನು ಉದ್ದೇಶಿಸಿ ಮಾತನಾಡಿ ಚರ್ಚೆಯಲ್ಲಿ ಭಾಗವಹಿಸುವ ಮಕ್ಕಳ ಪ್ರಶ್ನೆಗೆ ಉತ್ತರಿಸುವರು.
ಚರ್ಚೆಯಲ್ಲಿ ದೇಶಾದ್ಯಂತ ಒಟ್ಟು 40 ವಿದ್ಯಾರ್ಥಿಗಳು ಭಾಗವಹಿಸುವರು. ಕರ್ನಾಟಕದಿಂದ ಏಕೈಕ ವಿದ್ಯಾರ್ಥಿಯಾಗಿ ಮೈಸೂರಿನಲ್ಲಿ ಜವಾಹರ ನವೋದಯ ವಿದ್ಯಾಲಯದ ಎಂ.ಬಿ. ತರುಣ್ ಈ ಚರ್ಚೆಯಲ್ಲಿ ಭಾಗವಹಿಸುತ್ತಿದ್ದಾನೆ ಎಂದು ಜವಾಹರ ನವೋದಯ ವಿದ್ಯಾಲಯದ ಪ್ರಾಚಾರ್ಯ ಜೆ. ಮಧುಸೂಧನನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ