ಗದಗದಲ್ಲಿ ಕಿತ್ತೂರು ಚೆನ್ನಮ್ಮ ಪ್ರತಿಮೆಗೆ ಪುಷ್ಪಾರ್ಚನೆ ಮಾಡಿ ಗೌರವಿಸಿದ ನಳಿನ್ ಕುಮಾರ್ ಕಟೀಲ್

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ರಾಜ್ಯ ಚುನಾವಣೆ ಹಿನ್ನೆಲೆ ಗದಗ ಜಿಲ್ಲಾ ಪ್ರವಾಸದಲ್ಲಿರುವ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಬುಧವಾರ ಸಮಸ್ತ ಕನ್ನಡ ನಾಡಿನ ಮಹಿಳೆಯರ ಶೌರ್ಯದ ಪ್ರತೀಕವಾಗಿರುವ, ವೀರವನಿತೆ ಕಿತ್ತೂರು ಚೆನ್ನಮ್ಮ ಪ್ರತಿಮೆಗೆ ಪುಷ್ಪಾರ್ಚನೆ ಮಾಡಿ ಗೌರವ ಸಲ್ಲಿಸಿದರು.

ಇದೇ ಸಂದರ್ಭ ಚುನಾವಣಾ ಪ್ರಚಾರದಲ್ಲಿ ಪಾಲ್ಗೊಂಡ ಅವರು, ಗದಗ ಮತಕ್ಷೇತ್ರದ BLA2 ಮತ್ತು ಬೂತ್ ಅಧ್ಯಕ್ಷರ ಮೇಲ್ಪಟ್ಟವರ ಸಭೆಯನ್ನು ನಡೆಸಿದರು.

ಸಭೆಯಲ್ಲಿ ಗದಗ ಕ್ಷೇತ್ರದ ಅಭ್ಯರ್ಥಿಗಳಾದ ಅನಿಲ್ ಮೆಣಸಿನಕಾಯಿ, ವಿಭಾಗ ಪ್ರಭಾರಿಗಳಾದ ಲಿಂಗರಾಜ ಪಾಟೀಲ್ ಹಾಗೂ ಪ್ರಮುಖರು ಉಪಸ್ಥಿತರಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!